20.6 C
Sidlaghatta
Tuesday, July 15, 2025

ಬೀದಿ ನಾಟಕದ ಮೂಲಕ ಮತದಾನದ ಬಗ್ಗೆ ಅರಿವು

- Advertisement -
- Advertisement -

ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಮತದಾನದ ಮಹತ್ವದ ಬಗ್ಗೆ ಮತದಾರರಲ್ಲಿ ಜಾಗೃತಿ ಮೂಡಿಸಲು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಶಿಡ್ಲಘಟ್ಟದ ಬಸ್ ನಿಲ್ದಾಣದಲ್ಲಿ ಬುಧವಾರ ಬೀದಿನಾಟಕ ಪ್ರದರ್ಶನ ಮತ್ತು ಜಾನಪದ ಗೀತೆಗಳ ಮೂಲಕ ಪ್ರಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಡ್ಡಾಯ ಮತದಾನದ ಮಹತ್ವ, ಯಾವುದೇ ಆಮಿಷಗಳಿಗೆ ಬಲಿಯಾಗದೇ ಮತದಾನ ಮಾಡುವ ಬಗ್ಗೆ, ಮತದಾನ ಮಾಡುವ ಮುನ್ನ ಎಂತಹ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು, ಅಮಿಷಗಳನ್ನು ಕಂಡಲ್ಲಿ ಮತದಾರರು ಕೈಗೊಳ್ಳಬೇಕಿರುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಜಾನಪದ ಗೀತೆ, ಬೀದಿ ನಾಟಕ ಮೂಲಕ ಜಾಗೃತಿ ಮೂಡಿಸಲಾಯಿತು.
ಮತದಾನ ಸಂವಿಧಾನಾತ್ಮಕ ಹಕ್ಕಾಗಿದ್ದು, ಮತ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವದ ಬಲವರ್ಧನೆ ಮಾಡಬೇಕು ಪ್ರಜಾಪ್ರಭುತ್ವದಲ್ಲಿ ಮತಹಕ್ಕು ಚಲಾಯಿಸುವುದು ೧೮ ವರ್ಷ ತುಂಬಿದ ಪ್ರತಿಯೊಬ್ಬರ ಕರ್ತವ್ಯವಾಗಿದೆ. ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾದ ಮತದಾರರು ಚುನಾವಣೆಯಲ್ಲಿ ಕಡ್ಡಾಯವಾಗಿ ಮತ ಚಲಾಯಿಸಬೇಕು ಎಂದರು.
ಪ್ರಜಾಪ್ರಭುತ್ವದಲ್ಲಿ ಮತದಾನ ಮಹತ್ವ ಕಾರ್ಯವಾಗಿದ್ದು ಈ ಕಾರ್ಯವನ್ನು ಕಡ್ಡಾಯವಾಗಿ ಮಾಡಲೇಬೇಕು ಎಂಬುದನ್ನು ಬೀದಿ ನಾಟಕದ ಮೂಲಕ ಸಿದ್ದಾರ್ಥ ಕಲಾತಂಡದ ಕಲಾವಿದರು ಮನೋಜ್ಞವಾಗಿ ಅಭಿನಯಿಸಿ ಅರಿವು ಮೂಡಿಸಿದರು.
“ತಾಲ್ಲೂಕಿನಾದ್ಯಂತ ಹತ್ತು ಕಡೆ ಒಂದು ವಾರದ ಕಾಲ ಮತದಾನದ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ನಮ್ಮ ಜಿಲ್ಲೆಯ ಜನರು ಅತಿ ಹೆಚ್ಚು ಮತದಾನ ಮಾಡಿ ಪ್ರಜಾತಂತ್ರದ ವ್ಯವಸ್ಥೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಮಾಡುವುವು ನಮ್ಮ ಉದ್ದೇಶವಾಗಿದೆ” ಎಂದು ಸ್ವೀಪ್ ಪ್ರಚಾರ ಸಮಿತಿ ತಾಲ್ಲೂಕು ಅಧ್ಯಕ್ಷ ಹಾಗೂ ತಾಲ್ಲೂಕು ಪಂಚಾಯಿತಿ ಇಒ ಬಿ.ಶಿವಕುಮಾರ್ ತಿಳಿಸಿದರು.
ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕ ಬೋಜಣ್ಣ, ನಗರಸಭೆ ಆಯುಕ್ತ ಹನುಮಂತರಾಜು, ಗ್ರಾಮೀಣ ಉದ್ಯೋಗ ಸಹಾಯಕ ನಿರ್ದೇಶಕ ಶ್ರೀನಾಥ್ ಗೌಡ, ಸಿದ್ದಾರ್ಥ ಕಲಾತಂಡದ ಕಲಾವಿದರು ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!