12.1 C
Sidlaghatta
Monday, January 19, 2026

ಬೀಳ್ಕೊಡುಗೆ ಸಮಾರಂಭ

- Advertisement -
- Advertisement -

ನಗರದ ಶ್ರೀ ಸರಸ್ವತಿ ಕಾನ್ವೆಂಟ್ ಪ್ರೌಢಶಾಲೆಯ ಉಪಾದ್ಯಾಯರಾಗಿ ೩೪ ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ ಮೇ ೩೧ ರಂದು ನಿವೃತ್ತಿ ಹೊಂದಿದ ಪ್ರಭಾರ ಮುಖ್ಯಶಿಕ್ಷಕ ಎನ್.ಸುಂದರನ್ ಹಾಗೂ ಪ್ರಯೋಗಾಲಯ ಸಹಾಯಕರಾದ ಕೆ.ವಿ.ಶ್ರೀನಿವಾಸಯ್ಯ ಅವರಿಗೆ ಶಾಲೆಯ ಆಡಳಿತ ಮಂಡಳಿ, ಪ್ರೌಢಶಾಲಾ ಸಿಬ್ಬಂದಿ ವರ್ಗ ಹಾಗೂ ಪೂರ್ವ ಪ್ರಾಥಮಿಕ ಶಾಲೆಯ ವತಿಯಿಂದ ಬೀಳ್ಕೊಡುಗೆ ಸಮಾರಂಭವನ್ನು ಏರ್ಪಡಿಸಲಾಗಿತ್ತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ನಿವೃತ್ತ ಪ್ರಭಾರ ಮುಖ್ಯಶಿಕ್ಷಕ ಎನ್ ಸುಂದರನ್ ತಮ್ಮ ಬಾಲ್ಯದಿಂದ ಇಲ್ಲಿಯವರೆಗಿನ ತಮ್ಮ ಜೀವನದ ಪ್ರಮುಖ ಘಟ್ಟಗಳನ್ನು ಮೆಲುಕುಹಾಕಿ ತಮ್ಮ ಉನ್ನತಿಗೆ ಕಾರಣಕರ್ತರಾದ ಪೋಷಕರು, ಕುಟುಂಬದವರು ಹಾಗೂ ತಮ್ಮ ಕರ್ತವ್ಯವನ್ನು ಸರಾಗವಾಗಿ ಮಾಡಲು ಸಹಕರಿಸಿದ ಎಲ್ಲಾ ಸಿಬ್ಬಂದಿವರ್ಗದವರಿಗೆ ಧನ್ಯವಾದ ಸಮರ್ಪಿಸಿದರು.
ಸಂಸ್ಥೆಯ ಹಿರಿಯ ಮಾರ್ಗದರ್ಶಕರಾದ ಎನ್.ವೆಂಕಟಸುಬ್ಬರಾವ್, ಅಧ್ಯಕ್ಷೆ ವಿ.ಸೀತಾಲಕ್ಷ್ಮಿ, ಕಾರ್ಯದರ್ಶಿ ಎನ್. ಶ್ರೀಕಾಂತ್, ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಎಸ್. ಕೆ. ಗೋಪಿನಾಥ್ ಹಾಗೂ ಎಲ್ಲಾ ಸಿಬ್ಬಂದಿ ವರ್ಗದವರು ಈ ಸಂದರ್ಭದಲ್ಲಿ ಹಾಜರಿದ್ದರು.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!