ಶಿಡ್ಲಘಟ್ಟ ತಾಲ್ಲೂಕಿನ ಆನೂರು ಗ್ರಾಮದ ಬುದ್ದಿಮಾಂದ್ಯ ಮಕ್ಕಳ ವಸತಿ ಶಾಲೆಯ ಮಕ್ಕಳಿಗೆ ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಘಟಕದ ಸದಸ್ಯರು ರಾಜ್ಯ ಘಟಕದ ಅಧ್ಯಕ್ಷ ಅಗಲಗುರ್ಕಿ ಚಲಪತಿ ಅವರ ಹುಟ್ಟುಹಬ್ಬದ ಪ್ರಯುಕ್ತ ಶುಕ್ರವಾರ ಅನ್ನಸಂತರ್ಪಣೆ ಮತ್ತು ಹಣ್ಣುಗಳನ್ನು ವಿತರಿಸಲಾಯಿತು. ಕರವೇ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೇಲೂರು ಶ್ರೀಧರ್, ತಾಲ್ಲೂಕು ಅಧ್ಯಕ್ಷ ಮಳಮಾಚನಹಳ್ಳಿ ಹರೀಶ್, ರಮೇಶ್, ಶ್ರೀನಿವಾಸ್, ಸಂತೋಷ್, ಬಾಲರಾಜ್, ಕೆಂಪೇಗೌಡ, ಶಿವರಾಮ್ ಹಾಜರಿದ್ದರು.