ಬೆಂಕಿ ಆರಿಸಿ, ಗೋಮಾಳ ಉಳಿಸಿ

- Advertisement -
- Advertisement -

ತಾಲ್ಲೂಕಿನ ದಿಬ್ಬೂರಹಳ್ಳಿ ಗ್ರಾಮ ಪಂಚಾಯತಿಯ ವೆಂಕಟಕೃಷ್ಣಮ್ಮನಹಳ್ಳಿಯಲ್ಲಿ ಮಂಗಳವಾರ ಫೌಂಡೇಶನ್ ಫಾರ್ ಇಕಲಾಜಿಕಲ್ ಸೆಕ್ಯೂರಿಟಿ (ಎಫ್. ಇ. ಎಸ್) ಸಂಸ್ಥೆಯು ಬೆಂಕಿ ತಡೆಗೆ ಜನ ಜಾಗೃತಿ ಆಂದೋಲನವನ್ನು ಹಮ್ಮಿಕೊಂಡಿತ್ತು.
ಈ ಸಂದರ್ಭದಲ್ಲಿ ಎಫ್.ಇ.ಎಸ್. ಸಂಸ್ಥೆಯ ಕಾರ್ಯಕರ್ತರಾದ ಕೃಷ್ಣಪ್ಪ, ನಿಖತ್, ಯೋಜನಾಧಿಕಾರಿ ಶಿಲ್ಪಾ ಹಾಗೂ ಪ್ರತಿನಿಧಿಗಳಾದ ಗೋಪಿ, ಲೀಲಾವತಿ ಮತ್ತು ಸೌಭಾಗ್ಯ ಅವರು ಬೆಂಕಿಯ ಅನಾಹುತ ಮತ್ತು ಮುಂಜಾಗೃತಾ ಕ್ರಮಗಳ ವಿಷಯದ ಕುರಿತಾಗಿ ಗ್ರಾಮಸ್ಥರೊಂದಿಗೆ ಚರ್ಚಿಸಿದರು.
ಬೇಸಿಗೆ ಕಾಲ ಬಂತೆಂದರೆ ಗ್ರಾಮದ ಸಾಮೂಹಿಕ ಆಸ್ತಿಗಳಾದ ಗೋಮಾಳ, ಗುಂಡುತೋಪು, ಬೆಟ್ಟ, ಗುಡ್ಡ ಹಾಗೂ ಅರಣ್ಯಗಳಿಗೆ ಬೆಂಕಿ ಬೀಳುವ ಸಾದ್ಯತೆಗಳು ಹೆಚ್ಚಾಗಿರುವುದರಿಂದ, ಗ್ರಾಮದ ಜನರು ಇಂತಹ ಬೆಂಕಿಯ ಅವಘಡಗಳು ತಡೆಯಲು ಅಗತ್ಯ ಮಂಜಾಗೃತಿ ಕ್ರಮಗಳನ್ನು ತೆಗೆದುಕೊಳ್ಳಲು ಗ್ರಾಮಸ್ಥರಿಗೆ ತಿಳುವಳಿಕೆ ನೀಡಿದರು. ಈ ಕಾರ್ಯಕ್ರಮದಲ್ಲಿ ಜನರಿಗೆ ಹಾಡುಗಳ ಮೂಲಕ ಗ್ರಾಮದ ಆಸ್ತಿ ಸಂರಕ್ಷಣೆಯ ಬಗ್ಗೆ ತಿಳಿಸಿದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!