ತಾಲ್ಲೂಕಿನ ಜಂಗಮಕೋಟೆಯ ಅಮರಾವತಿ ಗ್ರಾಮದಲ್ಲಿರುವ ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯಕ್ಕೆ ಮಂಜೂರಾಗಿರುವ ಜಾಗಕ್ಕೆ ಬುಧವಾರ ಉಪ ಮುಖ್ಯಮಂತ್ರಿ, ಉನ್ನತ ಶಿಕ್ಷಣ, ವೈದ್ಯಕೀಯ ಶಿಕ್ಷಣ, ಐ.ಟಿ.ಬಿ.ಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ.ಎನ್. ಅಶ್ವಥ್ ನಾರಾಯಣ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬೆಂಗಳೂರು ವಿಶ್ವವಿದ್ಯಾಲಯ ಸ್ಥಾಪನೆ ಮಾಡಬೇಕೆಂಬುವುದು ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜನರ ಬಹು ದಿನಗಳ ಬೇಡಿಕೆಯಾಗಿದೆ. ಈಗಾಗಲೆ ಉತ್ತರ ವಿಶ್ವವಿದ್ಯಾಲಯ ಸ್ಥಾಪನೆಯಾಗಬೇಕಿತ್ತು ಕಾರಣಂತರಗಳಿಂದ ಆಗಿಲ್ಲ. ಆದ್ದರಿಂದ ಶೀಘ್ರವಾಗಿ ಕಾಮಗಾರಿ ಪ್ರಾರಂಭ ಮಾಡಲು ಸ್ಥಳ ಪರಿಶೀಲನೆ ಮಾಡಲಾಗುತ್ತಿದೆ ಹಾಗೂ ಮುಂದಿನ ದಿನಗಳಲ್ಲಿ ಉನ್ನತ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಲಾಗುತ್ತದೆ ಎಂದು ತಿಳಿಸಿದರು.
ಚಿಕ್ಕಬಳ್ಳಾಪುರ. ಕೋಲಾರ ಮತ್ತು ಬೆಂಗಳೂರು ಗ್ರಾಮಾಂತರ ಜಲ್ಲೆಯ ಜನರು ಶಿಕ್ಷಣವನ್ನು ಬಲವಾಗಿ ನಂಬಿದ್ದಾರೆ. ಆದ್ದರಿಂದ ಈ ಸಮಾಜದಲ್ಲಿ ಸಾಕಷ್ಟು ಬದಲಾವಣೆಯಾಗಿದೆ. ಶಿಕ್ಷಣವನ್ನು ನಂಬಿದ ಕಾರಣ ಆರ್ಥಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಬದಲಾವಣೆಯಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಾಸಕ ವಿ.ಮುನಿಯಪ್ಪ, ಜಿಲ್ಲಾಧಿಕಾರಿ ಆರ್ ಲತಾ, ಉತ್ತರ ವಿಶ್ವವಿದ್ಯಾಲಯದ ಕುಲಪತಿ ಟಿ. ಡಿ ಕೆಂಪರಾಜು, ಉಪ ವಿಭಾಗಾಧಿಕಾರಿ ರಘುನಂದನ್, ತಹಶಿಲ್ದಾರ್ ಎಂ.ದಯಾನಂದ್ ಹಾಜರಿದ್ದರು.
- Advertisement -
- Advertisement -
- Advertisement -







