ಗ್ರಾಮೀಣ ಭಾಗದಲ್ಲಿ ಮಕ್ಕಳಿಗೆ ಪೌಷ್ಟಿಕಾಂಶಪೂರಿತ ಆಹಾರ ಲಭ್ಯವಾಗಬೇಕಿದೆ. ಅನೇಕ ಕಾರಣಗಳಿಂದ ಬೆಳಿಗ್ಗೆ ಮಕ್ಕಳು ತಿಂಡಿ ತಿನ್ನದೇ ಶಾಲೆಗೆ ಬಂದರೆ ಕಲಿಕಾಸಕ್ತಿ ಕ್ಷೀಣಿಸಲಿದೆ. ತಿಂಡಿ ವಿತರಿಸುವುದರಿಂದ ಮಕ್ಕಳ ಹಾಜರಾತಿಯನ್ನು ಹೆಚ್ಚಿಸಬಹುದಾಗಿದೆ ಎಂದು ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ನ ಸುರೇಂದ್ರ ತಿಳಿಸಿದರು.
ತಾಲ್ಲೂಕಿನ ಸುಗಟೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಚಿಕ್ಕಬಳ್ಳಾಪುರ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಸಹಯೋಗದಲ್ಲಿ ಶಾಲಾ ಮಕ್ಕಳಿಗೆ ಉಚಿತವಾಗಿ ಬಿಸ್ಕೆಟ್ ಮತ್ತು ಉಪಾಹಾರ ನೀಡುವ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ಪ್ರೇರಕ ನವೀನ್ ಮಾತನಾಡಿ, ಈಗಾಗಲೇ ಚಿಕ್ಕಬಳ್ಳಾಪುರ ತಾಲ್ಲೂಕಿನ ಹಲವು ಶಾಲೆಗಳಲ್ಲಿ ಈ ಯೋಜನೆಯು ಯಶಸ್ವಿಯಾಗಿ ನಡೆಯುತ್ತಿದ್ದು ಶಿಡ್ಲಘಟ್ಟ ತಾಲ್ಲೂಕಿಗೂ ವಿಸ್ತರಿಸಲು ಚಿಂತಿಸಲಾಗಿದೆ ಎಂದರು.
ಮುಖ್ಯಶಿಕ್ಷಕ ಎಚ್.ಎಸ್.ರುದ್ರೇಶಮೂರ್ತಿ, ಎಸ್ ಡಿ ಎಂ ಸಿ ಅಧ್ಯಕ್ಷ ನಾಗರಾಜಪ್ಪ, ಸದಸ್ಯೆ ಮುನಿರತ್ನಮ್ಮ, ಗ್ರಾಮ ಪಂಚಾಯ್ತಿ ಸದಸ್ಯ ಎನ್.ಅಶ್ವತ್ಥಪ್ಪ, ಶಿವಶಂಕರಪ್ಪ, ದೇವರಾಜು, ಷಣ್ಮುಗಪ್ಪ, ಭಾಗ್ಯಮ್ಮ ಅರುಣ್ ಕುಮಾರ್, ಆರ್.ನಾಗೇಶ್, ಬಚ್ಚೇಗೌಡ, ದೊಡ್ಡಮುನಿವೆಂಕಟಶೆಟ್ಟಿ, ಶಿಕ್ಷಕರು ಹಾಜರಿದ್ದರು.
- Advertisement -
- Advertisement -
- Advertisement -
- Advertisement -