27.7 C
Sidlaghatta
Tuesday, July 1, 2025

ಬೆಳೆ ವಿಮೆಗಳನ್ನು ಖಡ್ಡಾಯವಾಗಿ ಮಾಡಿಸಿ

- Advertisement -
- Advertisement -

ಬೆಳೆ ವಿಮೆಗಳನ್ನು ಮಾಡಿಸುವ ಮೂಲಕ ಪ್ರಕೃತಿ ವೈಪರೀತ್ಯದಿಂದ ಆಗುವ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರವನ್ನು ಪಡೆದುಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ತಿಳಿಸಿದರು.
ತಾಲ್ಲೂಕಿನ ಮೇಲೂರು, ಮಳ್ಳೂರು, ಚೌಡಸಂದ್ರ ಸುತ್ತ ಮುತ್ತ ಕಳೆದೆರಡು ದಿನಗಳ ಹಿಂದೆ ಬಿದ್ದ ಆಲಿಕಲ್ಲು ಮಳೆಯಿಂದಾಗಿ ಆದ ಬೆಳೆ ನಷ್ಟವನ್ನು ವೀಕ್ಷಿಸಲು ರೈತರ ತೋಟಗಳಿಗೆ ಗುರುವಾರ ಭೇಟಿ ನೀಡಿದ ಅವರು ಮಾತನಾಡಿದರು.
ದ್ರಾಕ್ಷಿ ಬೆಳೆಗಾರರ ರೈತ ಕೂಟವಿದ್ದರೂ ದ್ರಾಕ್ಷಿ ಬೆಳೆಗಾರರಿಗೆ ವಿಮೆ ಮಾಡಿಸದಿರುವುದು ದುರದೃಷ್ಟಕರ. ಪರಿಹಾರದ ಮೊತ್ತ ಕಡಿಮೆ, ವಿಮೆ ಮಾಡಿಸಿದ್ದಿದ್ದರೆ ಹೆಚ್ಚು ಹಣ ಸಿಗುತ್ತಿತ್ತು. ಕಳೆದ ಮೂರು ವರ್ಷಗಳಿಂದ ಸತತವಾಗಿ ಈ ಭಾಗದಲ್ಲಿ ಆಲಿಕಲ್ಲಿನ ಮಳೆಯಿಂದಾಗಿ ರೈತರು ನಷ್ಟ ಅನುಭವಿಸುತ್ತಿದ್ದಾರೆ. ಹಾಗಾಗಿ ವಿಮೆ ಮಾಡಿಸಲು ರೈತಕೂಟದ ಪದಾಧಿಕಾರಿಗಳು ರೈತರಲ್ಲಿ ಅರಿವನ್ನು ಮೂಡಿಸಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಂದ ನಷ್ಟದ ಮಾಹಿತಿಯನ್ನು ಪಡೆದರು. ಈ ಭಾಗದಲ್ಲಿ ಆಲಿಕಲ್ಲಿನ ಮಳೆಯಾಗಿದ್ದು ದಾಕ್ಷಿ, ಗೊಡಂಬಿ, ಹಿಪ್ಪು ನೇರಳೆ ಬೆಳೆಯು ನಷ್ಟವಾಗಿದೆ. ರೈತರಿಗೆ ಸರ್ಕಾರದಿಂದ ಸಿಗಬೇಕಾದ ಪರಿಹಾರವನ್ನು ನೀಡಲಾಗುತ್ತದೆ. ಎಲ್ಲಾ ರೈತರು ಬೆಳೆ ವಿಮೆ ಮಾಡಿಸಲು ಅಧಿಕಾರಿಗಳು ಕೂಡ ರೈತರಿಗೆ ಮಾಹಿತಿಯನ್ನು ನೀಡಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯತಿ ಸಿ.ಇ.ಓ ಕಾವೇರಿ, ತಹಶೀಲ್ದಾರ್ ಮನೋರಮ, ಕಂದಾಯ ನಿರೀಕ್ಷಕ ಸುಬ್ರಮಣಿ, ತೋಟಗಾರಿಕೆ ಇಲಾಖೆಯ ಅಧಿಕಾರಿಗಳು,ರೈತ ಮುಖಂಡ ಗೋಪಾಲಗೌಡ. ರೈತ ಸಂಘಟನೆಯ ತಾಲ್ಲೂಕು ಅಧ್ಯಕ್ಷ ರವಿಪ್ರಕಾಶ್, ಪ್ರತೀಶ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
error: Content is protected !!