21.1 C
Sidlaghatta
Tuesday, October 28, 2025

ಬೆಳ್ಳೂಟಿಯಲ್ಲಿ ರಾಜ್ಯೋತ್ಸವ, ರಕ್ತದಾನ ಶಿಬಿರ, ಅಂಗವಿಕಲರಿಗೆ ವೀಲ್ ಚೇರ್ ವಿತರಣೆ

- Advertisement -
- Advertisement -

ಕನ್ನಡ ರಾಜ್ಯೋತ್ಸವವನ್ನು ಕೇವಲ ಸಾಂಕೇತಿಕವಾಗಿ ಆಚರಿಸದೇ ರಕ್ತದಾನ ಮಾಡುತ್ತಾ ಯುವಕರು ಆಚರಿಸುತ್ತಿರುವುದು ಅರ್ಥಪೂರ್ಣವಾಗಿದೆ ಎಂದು ತಹಶಿಲ್ದಾರ್ ಜಿ.ಎ.ನಾರಾಯಣಸ್ವಾಮಿ ತಿಳಿಸಿದರು.
ತಾಲ್ಲೂಕಿನ ಬೆಳ್ಳೂಟಿ ಗ್ರಾಮದಲ್ಲಿ ಸೋಮವಾರ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರೆಡ್ಕ್ರಾಸ್ ಸಂಸ್ಥೆಯು ರಕ್ತನಿಧಿಯನ್ನು ಸ್ಥಾಪಿಸಿ ವಿವಿದೆಡೆ ರಕ್ತದಾನ ಶಿಬಿರವನ್ನು ನಡೆಸುತ್ತಿದೆ. ಅದರ ಆಜೀವ ಸದಸ್ಯರಾಗುವ ಮೂಲಕ ಹಾಗೂ ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡುವ ಮೂಲಕ ಸಮಾಜಕ್ಕೆ, ಗಾಯಾಳುಗಳಿಗೆ ಸಹಾಯ ಮಾಡಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಬೆಳ್ಳೂಟಿಯ ಭಾರತಾಂಬೆ ಕನ್ನಡ ಯುವಕರ ಸಂಘದ ವತಿಯಿಂದ ಅಂಗವಿಕಲೆ ಚೌಡಸಂದ್ರ ರೂಪಾ ಹಾಗೂ ಬೆಳ್ಳೂಟಿ ಗ್ರಾಮದ ಮಹಿಳೆಯೊಬ್ಬರಿಗೆ ವೀಲ್ ಚೇರ್ಗಳನ್ನು ನೀಡಿದರು. ರಕ್ತದಾನ ಶಿಬಿರದಲ್ಲಿ 41 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.
ಬೆಳ್ಳೂಟಿ ಗ್ರಾಮದ ಸರ್ಕಾರಿ ಶಾಲಾ ಆವರಣದಲ್ಲಿ ನಾಡ ಧ್ವಜಾರೋಹಣೆ ನಡೆಯಿತು. ಶಾಲಾ ವಿದ್ಯಾರ್ಥಿಗಳಿಂದ ನಾಡ ಗೀತೆ ಹಾಡಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.
ಶಾಸಕ ಎಂ.ರಾಜಣ್ಣ, ಕೋಚಿಮುಲ್ ನಿರ್ದೇಶಕ ಮುನಿಯಪ್ಪ, ಪಿ.ವಿ.ನಾಗರಾಜ್, ಖಂಡೇರಾವ್, ಗುರುರಾಜರಾವ್, ಚಂದ್ರಪ್ಪ, ಮಾರಪ್ಪ, ವೆಂಕಟಸ್ವಾಮಿ, ಮುರಳಿ, ತ್ಯಾಗರಾಜ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!