ನಗರದಿಂದ ಚಿಕ್ಕಬಳ್ಳಾಪುರಕ್ಕೆ ಹೋಗುವ ಬೈಪಾಸ್ ರಸ್ತೆಯಲ್ಲಿನ ತಿರುವಿನಲ್ಲಿ ಗಿಡಗಂಟೆಗಳು ಬೆಳೆದಿದ್ದು, ಅದನ್ನು ಶನಿವಾರ ಶಾರದಾ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ತೆರವುಗೊಳಿಸುವ ಮೂಲಕ ವಾಹನ ಸವಾರರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ.
ಬೈಪಾಸ್ ರಸ್ತೆಯಲ್ಲಿ ಕಳ್ಳಿ, ಮುಳ್ಳು ಹಾಗೂ ವಿವಿಧ ಗಿಡಗಂಟೆಗಳು ಬೆಳೆದಿದ್ದು ತಿರುವಿನಲ್ಲಿ ಬರುವ ವಾಹನಗಳಿಗೆ ಮುಂದಿನಿಂದ ಬರುವ ವಾಹನ ಕಾಣುತ್ತಿರಲಿಲ್ಲ. ನಗರಸಭೆಯವರಿಗಾಗಿ ಕಾಯದೇ ಶಾರದಾ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ತ್ಯಾಜ್ಯ ಹಾಗೂ ಅಡ್ಡವಾಗಿ ಬೆಳೆದಿರುವ ಗಿಡಗಳನ್ನು ತೆರವುಗೊಳಿಸಿದರು.
ಶಾರದಾ ವಿದ್ಯಾಸಂಸ್ಥೆಯ ಅಧ್ಯಕ್ಷ ಮುನಿರತ್ನಂ, ಕಾರ್ಯದರ್ಶಿ ಎ.ಎಂ.ಶ್ರೀಕಾಂತ್, ಮುಖ್ಯಶಿಕ್ಷಕರಾದ ವೆಂಕಟರಮಣಪ್ಪ, ಈಶ್ವರ್ಸಿಂಗ್, ಶಿಕ್ಷಕರಾದ ರಾಘವೇಂದ್ರ, ರಾಜೇಶ್, ಮುರಳಿ, ಮಂಜುನಾಥ್, ಮುನಿಯಪ್ಪ, ರಮೇಶ್, ಶಾಂತ, ಹೇಮಾವತಿ ಮತ್ತಿತರರು ಹಾಜರಿದ್ದರು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -