ಬರಗಾಲದ ಪರಿಸ್ಥಿತಿಯನ್ನು ಎದುರಿಸುತ್ತಿದ್ದ ತಾಲ್ಲೂಕಿನಲ್ಲಿ ಈಚೆಗೆ ಬಿದ್ದ ಮಳೆಯಿಂದಾಗಿ ಕೆರೆಗಳು ತುಂಬುತ್ತಿರುವುದು ರೈತರಿಗೆ ಆಶಾದಾಯಕವಾಗಿದೆ ಎಂದು ಶಾಸಕ ಎಂ.ರಾಜಣ್ಣ ತಿಳಿಸಿದರು.
ತಾಲ್ಲೂಕಿನ ದಿಬ್ಬೂರಹಳ್ಳಿ ಬಳಿಯ ಬೈರಸಾಗರ ಕೆರೆ ಮತ್ತು ಕಣಗಲಮ್ಮ ಕೆರೆ ತುಂಬಿ ಕೋಡಿ ಹೋಗಿದ್ದರಿಂದ ಗುರುವಾರ ತಮ್ಮ ಪತ್ನಿಯೊಂದಿಗೆ ಬಾಗಿನ ಅರ್ಪಿಸಿದ ನಂತರ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ನಮ್ಮ ಪೂರ್ವಜರು ಕೆರೆಗಳನ್ನು ಅತ್ಯಂತ ವೈಜ್ಞಾನಿಕವಾಗಿ ನಿರ್ಮಿಸಿದ್ದರು. ಒಂದು ಕೆರೆಯ ನೀರು ಮತ್ತೊಂದಕ್ಕೆ ಹೋಗುವಂತೆ ರೀತಿಯಲ್ಲಿ ಕೆರೆಗಳ ಸಾಲೇ ನಮ್ಮಲ್ಲಿದೆ. ಆದರೆ ಹಲವಾರು ಕರೆಗಳನ್ನು ಒತ್ತುವರಿ ಮಾಡಿರುವ ಕಾರಣ ನೀರು ಶೇಖರಣೆಯ ಸಾಮರ್ಥ್ಯ ಕಡಿಮೆಯಾಗಿದೆ. ಎಂಟು ವರ್ಷಗಳಿಂದ ತುಂಬದ ಕೆರೆಗಳು ಈ ಬಾರಿ ತುಂಬಿ ಹರಿದು ನಮ್ಮಲ್ಲಿನ ಕೆರೆಗಳ ಮಹತ್ವದ ಬಗ್ಗೆ ಜಾಗೃತರನ್ನಾಗಿಸಿದೆ. ವರುಣನ ಕೃಪೆಯಿಂದ ತಾಲ್ಲೂಕಿನಾದ್ಯಂತ ಮಳೆ ಹೀಗೇ ಮುಂದುವರೆದು ಕೆರೆಗಳು ತುಂಬಲಿ. ಇದರಿಂದ ಅಂತರ್ಜಲವೂ ಹೆಚ್ಚಾಗಲಿದೆ ಎಂದು ಹೇಳಿದರು.
ತಹಶೀಲ್ದಾರ್ ಜಿ.ಎ.ನಾರಾಯಣಸ್ವಾಮಿ, ಜಿಲ್ಲಾ ಪಂಚಾಯತಿ ಸದಸ್ಯೆ ಶಿವಲೀಲಾ ರಾಜಣ್ಣ, ಕೋಚಿಮುಲ್ ನಿರ್ದೇಶಕ ಬಂಕ್ ಮುನಿಯಪ್ಪ, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಡಾ.ಧನಂಜಯರೆಡ್ಡಿ, ಡಿ.ಸಿ.ಸಿ ಬ್ಯಾಂಕ್ ಮಾಜಿ ನಿರ್ದೇಶಕ ರಾಮಲಿಂಗಾರೆಡ್ಡಿ, ದೊಣ್ಣಹಳ್ಳಿ ರಾಮಣ್ಣ, ಶಿವಣ್ಣ, ನಂಜಪ್ಪ, ಎ.ಇ.ಇ ಶಿವಾನಂದ, ಆರ್.ಐ. ಆದಿಶೇಶಪ್ಪ, ಅರ್ಚಕ ರವಿ, ಸಬ್ಇನ್ಸ್ಪೆಕ್ಟರ್ ರಾಘವೇಂದ್ರ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -







