ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ರೇಷ್ಮೆ ಉತ್ಪಾದನೆಯಲ್ಲಿ ಅವಿಭಜಿತ ಕೋಲಾರ ಜಿಲ್ಲೆ ಅಗ್ರಸ್ಥಾನವನ್ನು ಹೊಂದಿದ್ದರೂ ಸಹ ಬೈವೋಲ್ಟೀನ್ ತಳಿಯನ್ನು ಬೆಳೆಯಲು ರೈತರಿಗೆ ಸರ್ಕಾರ ಪ್ರೋತ್ಸಾಹಿಸಬೇಕೆಂದು ರೇಷ್ಮೆ ಬೆಳೆಗಾರರು ಹಾಗೂ ಬಿಜೆಪಿ ಮುಖಂಡ ಸಿ.ವಿ.ಲೋಕೇಶ್ಗೌಡ ಒತ್ತಾಯಿಸಿದರು.
ಸರ್ಕಾರಿ ರೇಷ್ಮೆ ಗೂಡಿನ ಮಾರುಕಟ್ಟೆಯಲ್ಲಿ ಬೈವೋಲ್ಟೀನ್ ತಳಿಯ ಗೂಡುಗಳನ್ನು ಗರಿಷ್ಠ ೩೩೦ ರೂಗಳಿಗೆ ಮಾರಾಟ ಮಾಡಿ ಪ್ರಮಾಣಮತ್ರ ಸ್ವೀಕರಿಸಿ ಅವರು ಮಾತನಾಡಿದರು. ರೇಷ್ಮೆ ಉದ್ಯಮವನ್ನು ಅಭಿವೃದ್ಧಿಪಡಿಸಲು ಸರ್ಕಾರ ಮತ್ತು ರೇಷ್ಮೆ ಅಧಿಕಾರಿಗಳು ಬೈವೋಲ್ಟೀನ್ ತಳಿಯ ಗೂಡುಗಳನ್ನು ಬೆಳೆಸಬೇಕೆಂದು ಪ್ರೇರೇಪಿಸುತ್ತಿದ್ದಾರೆ. ಪ್ರತಿ ಕೆಜಿ ಗೂಡಿಗೆ ೫೦ ರೂಗಳು ಪ್ರೋತ್ಸಾಹ ದನವನ್ನು ಸರ್ಕಾರ ನೀಡುತ್ತಿದ್ದು ಅದನ್ನು ೧೦೦ ರೂಗಳಿಗೆ ಏರಿಸಬೇಕೆಂದು ಅವರು ಒತ್ತಾಯಿಸಿದರು.
ಮಿಶ್ರ ತಳಿಯ ಗೂಡು ಬೆಳೆಯಲು ಹಾಗೂ ಬೈವೋಲ್ಟೀನ್ ತಳಿಯ ಗೂಡುಗಳನ್ನು ಬೆಳೆಯಲು ತೀರಾ ವ್ಯತ್ಯಾಸವಿದೆ. ಹಾಗಾಗಿ ಶ್ರಮಕ್ಕೆ ತಕ್ಕಂತೆ ಬೈವೋಲ್ಟೀನ್ ತಳಿಯ ಗೂಡುಗಳನ್ನು ಬೆಳೆಯುವ ರೈತರಿಗೆ ಪ್ರೋತ್ಸಾಹ ದೊರೆಯುತ್ತಿಲ್ಲ. ಸರ್ಕಾರ ಬಯಲು ಸೀಮೆಯ ರೈತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಸಹಾಯಧನವನ್ನು ಹೆಚ್ಚಿಸಬೇಕೆಂದು ಅವರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ರೇಷ್ಮೆ ಸಹಾಯಕ ನಿರ್ದೇಶಕ ರತ್ನಯ್ಯಶೆಟ್ಟಿ,ಎಸ್.ಇ.ಓ ಆಂಜಿನೇಯರೆಡ್ಡಿ ಹಾಜರಿದ್ದರು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -