Home News ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಆದರ್ಶಗಳನ್ನು ಎಲ್ಲರೂ ರೂಡಿಸಿಕೊಳ್ಳಬೇಕು

ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಆದರ್ಶಗಳನ್ನು ಎಲ್ಲರೂ ರೂಡಿಸಿಕೊಳ್ಳಬೇಕು

0

ಜಗತ್ತಿನಲ್ಲಿರುವುದು ಒಂದೇ ಜಾತಿ, ಒಂದೇ ಮತ ಮತ್ತು ಒಂದೇ ದೇವರು ಎಂದು ಪ್ರತಿಪಾದಿಸಿದ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಆದರ್ಶಗಳನ್ನು ಎಲ್ಲರೂ ರೂಡಿಸಿಕೊಳ್ಳಬೇಕು ಎಂದು ತಹಸೀಲ್ದಾರ್ ಕೆ.ಎಂ.ಮನೋರಮಾ ಹೇಳಿದರು.
ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಾಡಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಆಯೋಜನೆ ಮಾಡಲಾಗಿದ್ದ ಬ್ರಹ್ಮಶ್ರೀ ನಾರಾಯಣ ಗುರುಗಳ ೧೬೨ ನೇ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ದೇಶದಲ್ಲಿ ಜಿಡ್ಡುಗಟ್ಟಿರುವ ಮೌಢ್ಯಗಳ ವಿರುದ್ದ ಹೋರಾಟ ನಡೆಸಿದ ಶ್ರೀ ನಾರಾಯಣ ಗುರುಗಳು ಶೋಷಿತರ ಪಾಲಿಗೆ ದಾರಿ ದೀಪವಾಗಿದ್ದರು ಎಂದ ಅವರು ದೇಶದ ಯುವಜನತೆ ಇವರ ತತ್ವಾದರ್ಶಗಳನ್ನು ಮೈಗೂಡಿಸಿಕೊಳ್ಳುವ ಮೂಲಕ ದೇಶದ ಪ್ರಗತಿಗೆ ಕಾರಣಕರ್ತರಾಗಬೇಕು ಎಂದರು.
ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯತಿ ಇಓ ವೆಂಕಟೇಶ್, ಅಕ್ಷರದಾಸೋಹ ಸಹಾಯಕ ನಿರ್ದೇಶಕ ವೆಂಕಟೇಶ್ ಮತ್ತಿತರರು ಮಾತನಾಡಿದರು.
ಗ್ರೇಡ್ ೨ ತಹಸೀಲ್ದಾರ್ ವಾಸುದೇವಮೂರ್ತಿ, ಬಿಸಿಎಂ ಇಲಾಖೆಯ ಶಂಕರ್, ಅಕ್ಷರದಾಸೋಹ ಸಹಾಯಕ ನಿರ್ದೇಶಕ ವೆಂಕಟೇಶ್, ಅರಣ್ಯ ಇಲಾಖೆಯ ತಿಮ್ಮರಾಯಪ್ಪ ಮತ್ತಿತರರು ಹಾಜರಿದ್ದರು.