25.1 C
Sidlaghatta
Thursday, September 28, 2023

ಬ್ರಹ್ಮಶ್ರೀ ನಾರಾಯಣ ಗುರು ಅವರ ಜಯಂತ್ಯುತ್ಸವ ಕಾರ್ಯಕ್ರಮ

- Advertisement -
- Advertisement -

ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಸೋಮವಾರ ತಾಲ್ಲೂಕು ಆಡಳಿತದ ವತಿಯಿಂದ ಆಯೋಜಿಸಿದ್ದ ಬ್ರಹ್ಮಶ್ರೀ ನಾರಾಯಣ ಗುರು ಅವರ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಶಾಸಕ ವಿ.ಮುನಿಯಪ್ಪ ಅವರು ಮಾತನಾಡಿದರು.
ಬ್ರಹ್ಮಶ್ರೀ ನಾರಾಯಣ ಗುರುಗಳು ಮಹಾತ್ಮ ಗಾಂಧೀಜಿಯವರ ಒಡನಾಟದಲ್ಲಿ ಗುರುತಿಸಿಕೊಂಡು ದೇಶಕ್ಕಾಗಿ ಹೋರಾಡಿದ ಮಹಾನ್ ವ್ಯಕ್ತಿ ಎಂದು ಅವರು ತಿಳಿಸಿದರು.
ಬ್ರಹ್ಮಶ್ರೀ ನಾರಾಯಣ ಗುರು ಅವರು ಜಾತಿ, ಮತ ಭೇದವಿಲ್ಲದೇ ಎಲ್ಲರೂ ಒಂದೇ ಎಂಬ ಸಂದೇಶವನ್ನು ಸಾರಿ, ಪರಿಸರ ರಕ್ಷಣೆ ಜಾಗೃತಿ ಮೂಡಿಸಿದವರು. ಹಾಗೂ ಮಾನವನಿಗೆ ಮರುಜನ್ಮವೆಂಬುದಿಲ್ಲ ಎಂದು ಸಾರಿದ ಧೀಮಂತ ವ್ಯಕ್ತಿತ್ವ ಇವರದ್ದು ಎಂದರು.
ತಹಶೀಲ್ದಾರ್‌ ಅಜಿತ್‌ಕುಮಾರ್‌ ರೈ ಮಾತನಾಡಿ, ಕೇರಳದ ಮೂಲದವರಾದ ಇವರು ದೇಶದಾದ್ಯಂತ ಸಂಚರಿಸಿ ಮನುಕುಲದ ಏಳಿಗೆಗೆ ಸಲ್ಲಿಸಿದ ಸೇವೆ ಸ್ಮರಿಸಿ ಅವರ ಸ್ಮರಣೆಯಲ್ಲಿ ಅಂಚೆ ಚೀಟಿ ಹಾಗು 5 ರೂ ನಾಣ್ಯದಲ್ಲಿ ಇವರ ಭಾವಚಿತ್ರವನ್ನು ಮುದ್ರಿಸುವ ಮೂಲಕ ಗೌರವ ತೋರಲಾಗಿದೆ ಎಂದು ಹೇಳಿದರು.
ಆರ್ಯ ಈಡಿಗ ಸಂಘದ ತಾಲ್ಲೂಕು ಅಧ್ಯಕ್ಷ ಸಾದಲಿ ಎಸ್.ಎನ್.ವೆಂಕಟಾಚಲಪತಿ, ನಗರಸಭೆ ಆಯುಕ್ತ ಚಲಪತಿ, ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರಬಾಬು, ಸರ್ಕಲ್‌ ಇನ್ಸ್‌ಪೆಕ್ಟರ್‌ ಸಿದ್ದರಾಜು, ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷ ಭೀಮೇಶ್‌ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
error: Content is protected !!