ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಸೋಮವಾರ ಸಂಜೆ ಭಾರತ ಮಾತಾ ಪೂಜಾ ಕಾರ್ಯಕ್ರಮ ಮತ್ತು ಸ್ವಾಮಿ ವಿವೇಕಾನಂದರ 152ನೇ ಜಯಂತಿಯ ಕಾರ್ಯಕ್ರಮವನ್ನು ನಗರೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಸಲಾಯಿತು.
ಕಾರ್ಯಕ್ರಮದ ಮುಖ್ಯಅತಿಥಿಗಳಾದ ಚಿಕ್ಕಬಳ್ಳಾಪುರ ವಿಶ್ವ ಹಿಂದೂ ಪರಿಶತ್ತಿನ ಅಧ್ಯಕ್ಷ ವಿಜಯಶಂಕರ್ ಮಾತನಾಡಿ ಸಣ್ಣ ಸಣ್ಣ ಉಪಕಥೆಗಳ ಮೂಲಕ ವಿವೇಕಾನಂದರ ಆದರ್ಶ, ಭಕ್ತಿ, ದೇಶಪ್ರೇಮ, ನಿಷ್ಠೆ ಮುಂತಾದ ವಿಷಯಗಳನ್ನು ತಿಳಿಸಿ, ಸ್ವಂತಕ್ಕೆ ಸ್ವಲ್ಪ ಸಮಾಜಕ್ಕೆ ಸರ್ವಸ್ವ ಎಂಬ ಶ್ರೇಷ್ಠ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕೆಂದು ತಿಳಿಸಿದರು.
ವಕೀಲ ರವೀಂದ್ರನಾಥ್ ಮಾತನಾಡಿ ಸ್ವಾಮಿ ವಿವೇಕಾನಂದರು ಭಾರತ ಮಾತೆಗೆ ತಮ್ಮನ್ನು ಸಂಪೂರ್ಣವಾಗಿ ಸಮರ್ಪಿಸಿಕೊಂಡ ಹಾಗೆ ನಾವುಗಳು ಸ್ವಾಮಿ ವಿವೇಕಾನಂದರ ಮಾರ್ಗದಲ್ಲಿ ನಡೆಯಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ದೇಶಭಕ್ತಿಗೀತೆಯನ್ನು ಹಾಡಲಾಯಿತು. ಕಾರ್ಯಕ್ರಮದಲ್ಲಿ ಸಮಿತಿಯ ಅಧ್ಯಕ್ಷ ಶಂಕರ್, ಹಿರಿಯ ಕಾರ್ಯಕರ್ತರು ಹಾಗೂ ಹೊಸ ಶಿಬಿರದ ಶಿಕ್ಷಣಾರ್ಥಿಗಳು ಭಾಗವಹಿಸಿದ್ದರು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -