ಭಾವನಾ ಮಹರ್ಷಿ ಜಯಂತ್ಯುತ್ಸವ

- Advertisement -
- Advertisement -

ತಾಲ್ಲೂಕು ಪದ್ಮಶಾಲಿ ಸಂಘದ ವತಿಯಿಂದ ನಗರದಲ್ಲಿ ಭಾವನಾ ಮಹರ್ಷಿ ಜಯಂತ್ಯುತ್ಸವವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ಉಲ್ಲೂರುಪೇಟೆಯ ವೀರಾಂಜನೇಯಸ್ವಾಮಿ ದೇವಾಲಯದಲ್ಲಿ ವೈಶಾಖ ಶುದ್ಧ ಸಪ್ತಮಿ ಶನಿವಾರ ಭಾವನಾ ಮಹರ್ಷಿ ಜಯಂತ್ಯುತ್ಸವದ ಅಂಗವಾಗಿ ಗಂಗಾಪೂಜೆ, ಕಳಶಸ್ಥಾಪನೆ, ವಿಶೇಷ ಪೂಜೆಯನ್ನು ಆಯೋಜಿಸಲಾಗಿತ್ತು.
ವೀರಾಂಜನೇಯಸ್ವಾಮಿ, ಭದ್ರಾವತಿ ಹಾಗೂ ಭಾವನಾ ಮಹರ್ಷಿಗಳ ಉತ್ಸವ ಮೂರ್ತಿಗಳನ್ನು ವಿಶೇಷವಾಗಿ ಅಲಂಕರಿಸಿದ್ದ ಹೂವಿನ ಪಲ್ಲಕ್ಕಿಯಲ್ಲಿ ನಗರದ ಪ್ರಮುಖ ಬೀದಿಗಳಲ್ಲಿ ತಮಟೆ ವಾದ್ಯ ವೃಂದದೊಂದಿಗೆ ಮೆರವಣಿಗೆ ಮಾಡಲಾಯಿತು. ತಾಲ್ಲೂಕು ಪದ್ಮಶಾಲಿ ಸಂಘದ ಸದಸ್ಯರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಅನ್ನಸಂತರ್ಪಣೆಯನ್ನು ಆಯೋಜಿಸಲಾಗಿತ್ತು.
ಕೆ.ಪಿ.ಸಿ.ಸಿ ಉಪಾಧ್ಯಕ್ಷ ವಿ.ಮುನಿಯಪ್ಪ ಪೂಜೆಯಲ್ಲಿ ಪಾಲ್ಗೊಂಡರು. ಪದ್ಮಶಾಲಿ ಸಂಘದ ಅಧ್ಯಕ್ಷ ಎಸ್.ಕೆ.ನಾಗರಾಜ, ಟಿ.ಲಕ್ಷ್ಮೀನಾರಾಯಣ, ಸಿ.ಎನ್.ವಾಸು, ಎಲ್.ಕೃಷ್ಣಮೂರ್ತಿ, ಬಿ.ಲಕ್ಷ್ಮಿನಾರಾಯಣ, ಪಾರ್ಥಸಾರತಿ, ಎನ್.ಲಕ್ಷ್ಮೀನಾರಾಯಣ, ಮಂಜುನಾಥ್, ರಾಜ್ಕುಮಾರ್, ಯಶ್ವಂತ್, ಪ್ರದೀಪ್, ಮುರಳಿ, ಪೃಥ್ವಿ, ಪವನ್, ಚೇತನ್, ಗುರು, ಸುರೇಶ್ ಮತ್ತಿತರರು ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!