ಕೆರೆಯ ಅಂಗಳ, ಸ್ಮಶಾನ ಭೂಮಿ, ಅರಣ್ಯ ಭೂಮಿಗಳ ಒತ್ತುವರಿಯೂ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತದೆ. ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯ, ದಬ್ಬಾಳಿಕೆ, ಬಾಲ್ಯವಿವಾಹದಂತಹ ಪಿಡುಗುಗಳನ್ನು ತೊಲಗಿಸಿ ಉತ್ತಮ ಸಮಾಜವನ್ನು ನಿರ್ಮಾಣ ಮಾಡಬೇಕಾದಂತಹ ಹೊಣೆಗಾರಿಕೆ ಪ್ರತಿಯೊಬ್ಬ ನಾಗರೀಕರ ಮೇಲಿದೆ ಎಂದು ಮಾನವ ಹಕ್ಕುಗಳ ಜಾಗೃತಿ ಸಮಿತಿಯ ರಾಜ್ಯಾಧ್ಯಕ್ಷ ಡಾ.ಸಮೇತನಹಳ್ಳಿ ಲಕ್ಷ್ಮಣ್ಸಿಂಗ್ ಹೇಳಿದರು.
ನಗರದ ಕೋಟೆ ವೃತ್ತದಲ್ಲಿ ಮಾನವ ಹಕ್ಕುಗಳ ಜಾಗೃತಿ ಸಮಿತಿಯ ದ್ವಿತೀಯ ವರ್ಷದ ತಾಲ್ಲೂಕು ಸಮಾವೇಶದ ಅಂಗವಾಗಿ ಆಯೋಜಿಸಲಾಗಿದ್ದ ಕಾನೂನು ಅರಿವು ವಿಚಾರಣ ಸಂಕಿರಣ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಮಾನವ ಹಕ್ಕುಗಳ ಬಗ್ಗೆ ನಾಗರಿಕರಿಗೆ ನಿಖರವಾದ ಮಾಹಿತಿಯಿಲ್ಲದ ಕಾರಣ ಮಕ್ಕಳು, ಮಹಿಳೆಯರ ಮೇಲೆ ನಿರಂತರವಾಗಿ ದೌರ್ಜನ್ಯಗಳು ನಡೆಯುತ್ತಿದೆ. ಮಾನವೀಯತೆ ಕಣ್ಮರೆಯಾಗುತ್ತಿದೆ. ಪ್ರತಿಯೊಬ್ಬ ಹೆಣ್ಣು ಮಗುವೂ ಶಿಕ್ಷಣ ಪಡೆಯಬೇಕು. ಆಗ ಮಾತ್ರ ಸಮಾಜದಲ್ಲಿ ಪರಿವರ್ತನೆ ಕಾಣಲು ಸಾಧ್ಯವಾಗುತ್ತದೆ ಎಂದರು.
ತಾಲ್ಲೂಕು ಮಾನವ ಹಕ್ಕುಗಳ ಜಾಗೃತಿ ಸಮಿತಿಯ ಸಂಘಟನೆ ಜನಪರವಾಗಿ ಕೆಲಸ ಮಾಡಬೇಕು. ಯಾವುದೇ ಆಸೆ ಆಮಿಷಗಳಿಗೆ ಒಳಗಾಗಿ ಯಾರ ಮೇಲೂ ಒತ್ತಡಗಳನ್ನು ಹೇರದಂತೆ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ತಾಲ್ಲೂಕಿನಲ್ಲಿ ಯಾವುದೇ ಮಾನವ ಹಕ್ಕುಗಳ ಉಲ್ಲಂಘನೆಯಾದಾಗ ಅವರಿಗೆ ಬೆನ್ನೆಲುಬಾಗಿ ನಿಲ್ಲುವ ಜೊತೆಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕಿದೆ ಎಂದರು.
ನಗರಸಭೆ ಆಯುಕ್ತ ಚಲಪತಿ, ಸದಸ್ಯ ಕೇಶವಮೂರ್ತಿ, ಮಾನವ ಹಕ್ಕುಗಳ ಜಾಗೃತಿ ಸಮಿತಿ ಜಿಲ್ಲಾಧ್ಯಕ್ಷ ಜಾತವಾರ ರಾಮಕೃಷ್ಣಪ್ಪ, ತಾಲ್ಲೂಕು ಅಧ್ಯಕ್ಷ ಎನ್.ವಿಜಯ್, ಗೌರವಾಧ್ಯಕ್ಷ ರಾಮಕೃಷ್ಣಪ್ಪ, ಉಪಾಧ್ಯಕ್ಷರಾದ ಕೆ.ಎಂ.ಮೂರ್ತಿ, ವಿ.ದೇವರಾಜ್, ಕಾರ್ಯದರ್ಶಿ ಸುರೇಶ್, ಮಹಿಳಾ ಘಟಕದ ಅಧ್ಯಕ್ಷೆ ಸವಿತಾ, ಪ್ರದೀಪ್, ದೀಪು, ಕೆ.ಆರ್.ಪುರಂ ಕಾರ್ಮಿಕ ಸಮಿತಿ ಅಧ್ಯಕ್ಷ ಜಗದೀಶ್, ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ, ಮಡಿವಾಳ ಸಂಘದ ಅಧ್ಯಕ್ಷ ಮುರಳೀಧರ್, ಮಹಿಳಾ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಎಸ್.ಯಾಸ್ಮೀನ್ ತಾಜ್, ಸುಧಾಕರ್, ಶಿವಕುಮಾರಗೌಡ, ಮೌಲಾ ಹಾಜರಿದ್ದರು.
- Advertisement -
- Advertisement -
- Advertisement -
- Advertisement -