ಭ್ರಷ್ಟಾಚಾರವೆಂಬ ಸಾಮಾಜಿಕ ಪಿಡುಗನ್ನು ಬೇರು ಸಹಿತ ನಿರ್ಮೂಲನೆ ಮಾಡಿದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಸಿವಿಲ್ ನ್ಯಾಯಾಧೀಶರಾದ ಎನ್.ಎ.ಶ್ರೀಕಂಠ ಅಭಿಪ್ರಾಯಪಟ್ಟರು.
ನಗರದ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳ ಮತ್ತು ತಾಲ್ಲೂಕು ಕಾನೂನು ಸೇವಾ ಸಮಿತಿ ಸಹಯೋಗದಲ್ಲಿ ಏರ್ಪಡಿಸಲಾಗಿದ್ದ ಭ್ರಷ್ಟಾಚಾರ ವಿರುದ್ದ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಸಮಾಜದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ತಡೆಯಲು ವಿದ್ಯಾರ್ಥಿಗಳು ಅದರಲ್ಲಿಯೂ ಮುಖ್ಯವಾಗಿ ಯುವಕರು ಮುಂದಾಗಬೇಕು. ಪ್ರತಿಯೊಬ್ಬರೂ ಲಂಚ ನೀಡುವುದನ್ನು ಹಾಗೂ ಪಡೆಯುವುದನ್ನು ಬಿಟ್ಟಾಗ ಮುಂದಿನ ಪೀಳಿಗೆಗೆ ಉತ್ತಮ ಸಮಾಜ ನಿರ್ಮಿಸಲು ಸಹಕಾರಿಯಾಗುತ್ತದೆ. ಹಣದ ಮೇಲಿರುವ ವ್ಯಾಮೋಹವನ್ನು ಪ್ರತಿಯೊಬ್ಬರೂ ಕಡಿಮೆ ಮಾಡಿಕೊಂಡಾಗ ಭ್ರಷ್ಟಾಚಾರ ತಾನಾಗಿಯೇ ದೂರವಾಗುತ್ತದೆ ಎಂದರು.

ಕಾಲೇಜು ಪ್ರಾಂಶುಪಾಲ ಚಂದ್ರಾನಾಯಕ್ ಮಾತನಾಡಿ, ಮನುಷ್ಯ ಯಾವುದು ಸರಿ ಯಾವುದು ತಪ್ಪು ಎನ್ನುವುದನ್ನು ಆಯ್ಕೆ ಮಾಡಿಕೊಳ್ಳುವಲ್ಲಿ ಎಡುವುತ್ತಿರುವುದೇ ಭ್ರಷ್ಟಾಚಾರ ಬೆಳೆಯಲು ಕಾರಣವಾಗಿದೆ. ಹಾಗಾಗಿ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ನೈತಿಕತೆ ರೂಡಿಸಿಕೊಳ್ಳುವ ಮೂಲಕ ಭ್ರಷ್ಟಾಚಾರ ನಿರ್ಮೂಲನೆಗೆ ಮುಂದಾಗಬೇಕು ಎಂದರು.
ಈ ಸಂದರ್ಭದಲ್ಲಿ ಭ್ರಷ್ಟಾಚಾರ ತೊಲಗಿಸುವ ಮತ್ತು ಪ್ರಾಮಾಣಿಕತೆಯನ್ನು ಮೆರೆಯುವ ಪ್ರತಿಜ್ಞಾವಿಧಿ ಭೋದಿಸಲಾಯಿತು. ಭ್ರಷ್ಟಾಚಾರದ ಕುರಿತು ಆಯೋಜಿಸಲಾಗಿದ್ದ ಚರ್ಚಾಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಸಂದೀಶ್, ಸರ್ಕಾರಿ ಅಭಿಯೋಜಕಿ ಕುಮುದಿನಿ, ಭ್ರಷ್ಟಾಚಾರ ನಿಗ್ರಹ ದಳದ ಲಕ್ಮಿದೇವಿ, ಉಪನ್ಯಾಸಕರಾದ ಡಾ.ವೆಂಕಟೇಶ್, ರಾಮಚಂದ್ರಪ್ಪ, ರೋಶನ್ ಹಾಜರಿದ್ದರು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -







