24.1 C
Sidlaghatta
Saturday, December 20, 2025

ಮಕ್ಕಳಲ್ಲಿ ಸುರಕ್ಷತಾ ಭಾವನೆ ಹೆಚ್ಚಿದರೆ ಕಲಿಕೆಯೂ ಸುಲಭ

- Advertisement -
- Advertisement -

ಮಕ್ಕಳಿಗೆ ಮನೆ, ಸಮಾಜ, ಶಾಲೆಗಳೆಲ್ಲೆಡೆ ಸುರಕ್ಷತಾ ಹಾಗೂ ಸ್ವತಂತ್ರ ವಾತಾವರಣ ಸೃಷ್ಠಿಯಾದರೆ ಕಲಿಕೆಯೂ ಸುಲಭವಾಗುತ್ತದೆ ಎಂದು ಶಿಕ್ಷಕ ಬೈರಾರೆಡ್ಡಿ ತಿಳಿಸಿದರು.
ತಾಲ್ಲೂಕಿನ ಸುಗಟೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಸುರಕ್ಷತಾ ಸಪ್ತಾಹದ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ಸಮಾಜದ ಸ್ವಾಸ್ಥ್ಯವನ್ನು ಕೆಡಿಸುತ್ತವೆ. ಇಂತಹ ಪ್ರಕರಣಗಳು ಮರುಕಳಿಸದಂತೆ ತಡೆಯಬೇಕಾದ ಹೊಣೆಗಾರಿಕೆಯು ಪೋಷಕರು, ಶಿಕ್ಷಕರು, ಸರ್ಕಾರದ ಮೇಲಿದೆ ಎಂದು ತಿಳಿಸಿದರು.
ಮಕ್ಕಳೊಡನೆ ಸುರಕ್ಷತೆ ಕುರಿತಾಗಿ ಸಂವಾದ ನಡೆಯಿತು. ಗ್ರಾಮದಲ್ಲಿ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು. ಮಕ್ಕಳಿಗಾಗಿ ಪ್ರಬಂಧ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು. ಮಕ್ಕಳಿಂದ ಮಕ್ಕಳ ಸುರಕ್ಷೆಯ ಬಗ್ಗೆ ಕಿರುರೂಪಕ ಪ್ರದರ್ಶನ ನಡೆಯಿತು.
ಎಸ್ಡಿಎಂಸಿ ಅಧ್ಯಕ್ಷ ಎಸ್.ಆರ್.ನಾಗೇಶ್, ಗ್ರಾಮಪಂಚಾಯಿತಿ ಸದಸ್ಯ ಎನ್.ಅಶ್ವತ್ಥಪ್ಪ, ಎಸ್ಡಿಎಂಸಿ ಉಪಾಧ್ಯಕ್ಷೆ ಆರತಿ, ಶಿಕ್ಷಕ ಎಚ್.ಎಸ್.ರುದ್ರೇಶಮೂರ್ತಿ, ಅಂಗನವಾಡಿ ಕಾರ್ಯಕರ್ತೆಯರು, ಪೋಷಕರು, ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!