25.1 C
Sidlaghatta
Sunday, November 16, 2025

ಮಕ್ಕಳಿಂದ ಪುಸ್ತಕ ಅವಲೋಕನ ಕಾರ್ಯಕ್ರಮ

- Advertisement -
- Advertisement -

ತಾಲ್ಲೂಕಿನ ಕನ್ನಮಂಗಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪುಸ್ತಕ ಅವಲೋಕನ ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯ ಸಮೂಹ ಸಂಪನ್ಮೂಲ ವ್ಯಕ್ತಿ ವೀಣಾ ಮಾತನಾಡಿದರು.
ಮಕ್ಕಳಲ್ಲಿ ಓದುವ ಹವ್ಯಾಸವನ್ನು ಪ್ರೋತ್ಸಾಹಿಸಬೇಕು. ಅಂಕಗಳಿಗೆ ಮಾತ್ರ ಓದನ್ನು ಸಿಮೀತಗೊಳಿಸದೆ ಜ್ಞಾನಕ್ಕಾಗಿ ಓದಬೇಕು ಎಂದು ಅವರು ತಿಳಿಸಿದರು.
ಒಳ್ಳೆಯ ಪುಸ್ತಕ ಓದು ಮನುಷ್ಯನಿಗೆ ಸಂದಿಗ್ಧ ಪರಿಸ್ಥಿತಿಯಲ್ಲಿ ಧೈರ್ಯವನ್ನು, ಅಯೋಮಯ ಸ್ಥಿತಿಯಲ್ಲಿ ಮಾರ್ಗದರ್ಶನವನ್ನೂ ಮಾಡುತ್ತದೆ. ಪುಸ್ತಕಗಳನ್ನು ಓದುವುದರಿಂದ ಮಕ್ಕಳಲ್ಲಿ ಜ್ಞಾನ, ಏಕಾಗ್ರತೆ ಹಾಗೂ ಅಭಿವ್ಯಕ್ತಿ ಕೌಶಲ್ಯಗಳು ಬೆಳೆಯುತ್ತವೆ. ಮುಂದೆ ಮಕ್ಕಳಲ್ಲೂ ಸಾಹಿತ್ಯ ಅಭಿರುಚಿ ಬೆಳೆದು ಒಳ್ಳೆಯ ಪ್ರಜೆಗಳಾಗುತ್ತಾರೆ ಎಂದು ಹೇಳಿದರು.
ತೆಲುಗಿನ ಸಲೀಂ ಅವರು ಬರೆದಿರುವ ಮಕ್ಕಳ ಕಾದಂಬರಿಗಳ ಕನ್ನಡ ಅನುವಾದಗಳಾದ “ಮೇಧ 017” ಹಾಗೂ “ಅಪರಾಜಿತ” ಪುಸ್ತಕಗಳ ಬಗ್ಗೆ ಶಾಲೆಯ 8 ವಿದ್ಯಾರ್ಥಿಗಳಾದ ಐಶ್ವರ್ಯ, ಚೇತನ್, ಚೇತನ್ ಕುಮಾರ್, ಮೌನಿಕ, ಜೀವನ್ ಕುಮಾರ್, ಜಯಸಿಂಹ, ನರಸಿಂಹಮೂರ್ತಿ ಹಾಗೂ ಅರುಣ್ ತಮ್ಮ ಅನಿಸಿಕೆಗಳನ್ನು ಈ ಸಂದರ್ಭದಲ್ಲಿ ಹಂಚಿಕೊಂಡರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾರ್ಥಿನಿ ಮಾನಸ ವಹಿಸಿಕೊಂಡಿದ್ದರು. ಮಕ್ಕಳ ಕಾದಂಬರಿಗಳನ್ನು ತೆಲುಗಿನಿಂದ ಕನ್ನಡಕ್ಕೆ ಅನುವಾದಿಸಿರುವ ಲೇಖಕ ಧನಪಾಲ ನಾಗರಾಜಪ್ಪ ಅವರನ್ನು ಶಾಲೆಯ ವತಿಯಿಂದ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ತೆಲುಗಿನಿಂದ ಕನ್ನಡಕ್ಕೆ ಅನುವಾದಿಸಿರುವ ಲೇಖಕ ಧನಪಾಲ ನಾಗರಾಜಪ್ಪ, ಮುಖ್ಯ ಶಿಕ್ಷಕ ಕೆ.ವಿ.ಚೌಡರೆಡ್ಡಿ, ಶಿಕ್ಷಕರಾದ ಜೆ. ಶ್ರೀನಿವಾಸ, ಕೆ.ಶಿವಶಂಕರ, ಡಿ.ಜೆ.ಸುನೀತ, ಎಂ.ಪದ್ಮಾವತಿ ಹಾಗೂ ಎಸ್.ಕಲಾಧರ ಹಾಜರಿದ್ದರು. ವಿದ್ಯಾರ್ಥಿನಿ ಮಾನಸ ಅಧ್ಯಕ್ಷತೆ ವಹಿಸಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!