ಮಕ್ಕಳಿಗೆ ಉತ್ತಮವಾದ ಶಿಕ್ಷಣವನ್ನು ನೀಡಿ

- Advertisement -
- Advertisement -

ಧಾರ್ಮಿಕವಾದ ಕಾರ್ಯಕ್ರಮಗಳನ್ನು ಮಾಡುವುದರಿಂದ ಗ್ರಾಮಸ್ಥರು ಮತ್ತು ಸುತ್ತಮುತ್ತಲಿನ ನಾಗರಿಕರಲ್ಲಿ ಮನಶ್ಯಾಂತಿ ಹಾಗೂ ಐಕ್ಯತೆ ಉಂಟಾಗುತ್ತದೆ ಎಂದು ಚಿತ್ರದುರ್ಗದ ಕೃಷ್ಣಯಾದವನಂದ ಸ್ವಾಮೀಜಿ ತಮ್ಮ ಆಶೀರ್ವಚನದಲ್ಲಿ ತಿಳಿಸಿದರು.
ತಾಲ್ಲೂಕಿನ ದೇವರಮಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ದೊಗರನಾಯಕನಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣ ಮಾಡಲಾಗಿರುವ ಅಭಯಾಂಜನೇಯಸ್ವಾಮಿ ದೇವಾಲಯದ ಪ್ರತಿಷ್ಠಾನ ಮಹೋತ್ಸವದಲ್ಲಿ ಅವರು ಭಾಗವಹಿಸಿ ಮಾತನಾಡಿದರು.
ಪ್ರತಿಯೊಬ್ಬರೂ ಪ್ರೀತಿ ಆಧರಣೆಯಿಂದ ಒಗ್ಗೂಡಿ ಜೀವಿಸಬೇಕಾಗಿದೆ. ಮಕ್ಕಳಿಗೆ ಉತ್ತಮವಾದ ಶಿಕ್ಷಣವನ್ನು ನೀಡುವ ಮೂಲಕ ಮುಂದಿನ ಸಮಾಜವನ್ನು ಸಜ್ಜುಗೊಳಿಸಬೇಕು. ಸಮಾಜದಲ್ಲಿ ಉತ್ತಮವಾದ ವಾತಾವರಣ ನಿರ್ಮಾಣವಾಗಬೇಕಾದರೆ, ಜಾತಿ, ಕುಲ, ಮತ ಬೇದಗಳನ್ನು ಬಿಟ್ಟು, ಮಾನವರೆಲ್ಲರೂ ಒಂದೇ ಎಂಬ ಭಾವನೆಯಿಂದ ಸಾಮರಸ್ಯದ ಜೀವನ ನಡೆಸಬೇಕು ಎಂದರು.
ಶಾಸಕ ಎಂ.ರಾಜಣ್ಣ ಮಾತನಾಡಿ, ಸಮಾಜದ ಪ್ರತಿಯೊಂದು ವರ್ಗದ ಜನರು ಅಭಿವೃದ್ಧಿಯಾಗಬೇಕಾದರೆ, ಶಿಕ್ಷಣಕ್ಕೆ ಹೆಚ್ಚು ಒತ್ತುನೀಡಬೇಕು. ವಿದ್ಯಾರ್ಥಿನಿಲಯಗಳ ಅಭಿವೃದ್ದಿ, ಹಾಗೂ ವಿಧ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ದಿಯಾಗಬೇಕು. ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕಾಗಿ ಭೂಮಿ ಸರ್ವೆ ಕಾರ್ಯ ಮುಗಿದಿದ್ದು, ಎರಡು ಎಕರೆ ನಿಗದಿಯಾಗಿದೆ. ಸಮುದಾಯ ಮುಖಂಡರು ಸಭೆ ಸೇರಿ ನಿಲಯ ನಿರ್ಮಾಣಕ್ಕೆ ಮುಂದಾದರೆ ಅಗತ್ಯವಾಗಿರವ ಎಲ್ಲಾ ಸಹಕಾರ ನೀಡುವುದಾಗಿ ಹೇಳಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಹಾಗೂ ಕೆ.ಪಿ.ಸಿ.ಸಿ.ಉಪಾಧ್ಯಕ್ಷ ವಿ.ಮುನಿಯಪ್ಪ ಮಾತನಾಡಿ, ವಿದ್ಯಾರ್ಥಿನಿಲಯ ಕಾಮಗಾರಿಗೆ ವೈಯಕ್ತಿಕ ಸಹಾಯ ನೀಡುವುದಾಗಿ ಹೇಳಿದರು.
ವಿಜಯಪುರ ಬಸವ ಕಲ್ಯಾಣಮಠದ ಮಹದೇವಸ್ವಾಮೀಜಿ, ತಹಶೀಲ್ದಾರ್ ಜಿ.ಎ.ನಾರಾಯಣಸ್ವಾಮಿ, ಕೋಚಿಮುಲ್ ನಿರ್ದೇಶಕ ಬಂಕ್ಮುನಿಯಪ್ಪ, ಡಿ.ವಿ.ವೆಂಕಟೇಶ್, ಡಿ.ಎಂ.ಮುನಿವೆಂಕಟಪ್ಪ, ನಗರಸಭಾ ಸದಸ್ಯ ಅಪ್ಸರ್ಪಾಷಾ, ಪಲಿಚೇರ್ಲು ಗ್ರಾಮ ಪಂಚಾಯತಿ ಅಧ್ಯಕ್ಷ ಗೋಪಿ, ಯಾದವ ಸಂಘದ ಅಧ್ಯಕ್ಷ ಯೋಗಾನಂದ, ನಾರಾಯಣಸ್ವಾಮಿ,ಮುನಿವೆಂಕಟಪ್ಪ ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.

Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!