ಬೆಂಗಳೂರಿನ ಶ್ರೀ ವೆಂಕಟೇಶ್ವರ ತಾಂತ್ರಿಕ ಕಾಲೇಜಿನ ತಂಡ ತಾಲ್ಲೂಕಿನ ರಾಮೇಶ್ವರ ಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಕಂಪ್ಯೂಟರ್ ಹಾಗೂ ಪರಿಸರದ ಕಾಳಜಿಯ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಕಾಲೇಜಿನ ಪ್ರಾಧ್ಯಾಪಕರಾದ ಭರತ್, ಪುನೀತ್ ಕುಮಾರ್ ಹಾಗೂ ವಿದ್ಯಾರ್ಥಿಗಳಾದ ಸಚಿನ್ ಗೌಡ, ಸಾಯಿ ರಾಕೇಶ್, ನವೀನ್ ಮುಂತಾದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶಾಲೆಯ ಆವರಣದಲ್ಲಿ ಗಿಡಗಳನ್ನು ನೆಟ್ಟು ಮಕ್ಕಳಿಗೆ ಪುಸ್ತಕಗಳನ್ನು ವಿತರಿಸಿದರು