21.1 C
Sidlaghatta
Saturday, July 27, 2024

ಮಕ್ಕಳಿಗೆ ಕೃತಜ್ಞತೆ ಕಲಿಸಿದ ಶಿಕ್ಷಕರು ಧನ್ಯರು

- Advertisement -
- Advertisement -

ಮಕ್ಕಳಿಗೆ ಅಭಿವ್ಯಕ್ತಿ, ಕೃತಜ್ಞತೆ ಮತ್ತು ಜಾನಪದ ಕತೆಗಳನ್ನು ತಮ್ಮದಾಗಿಸಿಕೊಳ್ಳುವುದನ್ನು ಕಲಿಸಿರುವ ಕನ್ನಮಂಗಲದ ಶಿಕ್ಷರು ಹಾಗೂ ಅವರ ಐಕ್ಯಮತ್ಯ ಅಭಿನಂದನೀಯ ಎಂದು ನಿವೃತ್ತ ಪ್ರಾಧ್ಯಾಪಕ ಡಾ. ಆರ್.ಶೇಷಶಾಸ್ತ್ರಿ ತಿಳಿಸಿದರು.
ತಾಲ್ಲೂಕಿನ ಕನ್ನಮಂಗಲದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಗ್ರಾಮದ ಸ್ನೇಹ ಯುವಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಶುಕ್ರವಾರ ಆಯೋಜಿಸಿದ್ದ 11ನೇ ವರ್ಷದ ಅಂತರ ಶಾಲಾ ನಾಟಕೋತ್ಸವ, ಕನ್ನಡ ರಾಜ್ಯೋತ್ಸವ ಮತ್ತು ಶಾಲಾ ಆವರಣದ ವಿದ್ಯಾಗಣಪತಿ ಮಂದಿರದ ಐದನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ನಾಟಕದಂಥಹ ಪ್ರದರ್ಶಕ ಕಲೆಗಳ ಅಂತರ ಶಾಲಾ ನಾಟಕೋತ್ಸವ ನಡೆಸುವ ಮೂಲಕ ತಾಲ್ಲೂಕಿನಲ್ಲಿ ನಟನಾ ಪ್ರವೃತ್ತಿ ಮತ್ತು ಅದರೊಂದಿಗೆ ಸೃಜನಶೀಲತೆ ಹೆಚ್ಚಾಗುತ್ತದೆ. ನಾಟಕಗಳಿಗೆ ಆಯ್ದುಕೊಂಡ ವಿಷಯಗಳು ಸಮಕಾಲೀನ ಸಮಸ್ಯೆ, ಪ್ರಕೃತಿ ಮುಂತಾದವುಗಳಿದ್ದು, ಸರಳವಾಗಿವೆ. ಮಕ್ಕಳು ಮೊದಲ ಬಾರಿಯಾದರೂ ನುರಿತ ಕಲಾವಿದರಂತೆ ಅಭಿನಯಿಸಿದ್ದಾರೆ. ಗ್ರಾಮದ ಸ್ನೇಹ ಯುವಕರ ಕ್ಷೇಮಾಭಿವೃದ್ಧಿ ಸಂಘದವರು ಮಕ್ಕಳ ಅಭಿವ್ಯಕ್ತಿಯನ್ನು, ಬರಹಗಳನ್ನು ಪುಸ್ತಕ ರೂಪದಲ್ಲಿ ತರುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.

ಶಿಡ್ಲಘಟ್ಟ ತಾಲ್ಲೂಕಿನ ಕನ್ನಮಂಗಲದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ 11ನೇ ವರ್ಷದ ಅಂತರ ಶಾಲಾ ನಾಟಕೋತ್ಸವ ಕಾರ್ಯಕ್ರಮದಲ್ಲಿ ಶಾಲೆಯಿಂದ ವರ್ಗಾವಣೆಗೊಂಡ ಶಿಕ್ಷಕ ಎಂ.ದೇವರಾಜ್ ಅವರಿಗೆ ಗ್ರಾಮಸ್ಥರು ದ್ವಿಚಕ್ರ ವಾಹನವನ್ನು ಉಡುಗೊರೆಯಾಗಿ ನೀಡಿದರು.
ಶಿಡ್ಲಘಟ್ಟ ತಾಲ್ಲೂಕಿನ ಕನ್ನಮಂಗಲದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ 11ನೇ ವರ್ಷದ ಅಂತರ ಶಾಲಾ ನಾಟಕೋತ್ಸವ ಕಾರ್ಯಕ್ರಮದಲ್ಲಿ ಶಾಲೆಯಿಂದ ವರ್ಗಾವಣೆಗೊಂಡ ಶಿಕ್ಷಕ ಎಂ.ದೇವರಾಜ್ ಅವರಿಗೆ ಗ್ರಾಮಸ್ಥರು ದ್ವಿಚಕ್ರ ವಾಹನವನ್ನು ಉಡುಗೊರೆಯಾಗಿ ನೀಡಿದರು.

ಕೆ.ಪಿ.ಸಿ.ಸಿ ಉಪಾಧ್ಯಕ್ಷ ವಿ.ಮುನಿಯಪ್ಪ ಮಾತನಾಡಿ, ಕನ್ನಮಂಗಲ ಗ್ರಾಮದ ಅಭಿವೃದ್ಧಿಗೆ ಮತ್ತು ಮಕ್ಕಳ ಬಹುಮುಖಿ ಬೆಳವಣಿಗೆಗೆ ಗ್ರಾಮದ ಯುವಕರು ಸಜ್ಜಾಗಿರುವುದು ಎಲ್ಲಾ ಗ್ರಾಮಗಳಿಗೂ ಪ್ರೇರಣೆಯಾಗಿದೆ. ಇಲ್ಲಿನ ಒಗ್ಗಟ್ಟು ಮಾದರಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ನಿವೃತ್ತ ಪ್ರಾಧ್ಯಾಪಕರಾದ ಆರ್.ವೇಣುಗೋಪಾಲ್, ಡಾ. ಆರ್.ಶೇಷಶಾಸ್ತ್ರಿ, ಜಲತಜ್ಞ ಕೆ.ನಾರಾಯಣಸ್ವಾಮಿ, ವರ್ಗಾವಣೆಗೊಂಡ ಶಿಕ್ಷಕರಾದ ಎಚ್.ಡಿ.ಮಂಜುನಾಥ್, ವಿದ್ಯಾಲಕ್ಷ್ಮಿ, ನಿವೃತ್ತ ಅಂಗನವಾಡಿ ಸಹಾಯಕಿ ಆಂಜನಮ್ಮ ಅವರನ್ನು ಸನ್ಮಾನಿಸಲಾಯಿತು. ಶಾಲೆಯಿಂದ ವರ್ಗಾವಣೆಗೊಂಡ ಶಿಕ್ಷಕ ಎಂ.ದೇವರಾಜ್ ಅವರಿಗೆ ಗ್ರಾಮಸ್ಥರು ದ್ವಿಚಕ್ರ ವಾಹನವನ್ನು ಉಡುಗೊರೆಯಾಗಿ ನೀಡಿದರು.
ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಆರ್.ಶ್ರೀನಿವಾಸ್, ತುಮ್ಮನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಪಾರ್ವತಮ್ಮ ವೆಂಕಟೇಶಮೂರ್ತಿ, ಜಿಲ್ಲಾ ಪಂಚಾಯತಿ ಸದಸ್ಯ ಎಸ್.ಎಂ.ನಾರಾಯಣಸ್ವಾಮಿ, ಮಾಜಿ ಅಧ್ಯಕ್ಷ ಸುಬ್ರಮಣಿ, ಗ್ರಾಮ ಪಂಚಾಯತಿ ಸದಸ್ಯ ಡಿ.ಕೆ.ಶ್ರೀರಾಮ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ವೆಂಕಟೇಶ್, ಕೆ.ಎಂ.ಕೇಶವಪ್ಪ, ನರಸಿಂಹಪ್ಪ, ಅರಿಕೆರೆ ಮುನಿರಾಜು, ಆರ್.ಮಧುಸೂದನ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
error: Content is protected !!