15.1 C
Sidlaghatta
Thursday, December 25, 2025

ಮಕ್ಕಳಿಗೆ ಬಾಲ್ಯದಿಂದಲೇ ಕ್ರೀಡೆಯಲ್ಲಿ ಆಸಕ್ತಿ ಮೂಡಿಸಿ

- Advertisement -
- Advertisement -

ಮಕ್ಕಳನ್ನು ಕ್ರೀಡಾಕೂಟಗಳಲ್ಲಿ ಭಾಗವಹಿಸಲು ಬಾಲ್ಯದಿಂದಲೇ ಪ್ರೇರೇಪಿಸುವ ಕೆಲಸವನ್ನು ಪೋಷಕರು ಮಾಡಬೇಕು ಎಂದು ಕಾಂಗ್ರೆಸ್ ಮುಖಂಡ ವಿ.ಮುನಿಯಪ್ಪ ತಿಳಿಸಿದರು.
ಕರ್ನಾಟಕ ರೋಲರ್ ಸ್ಕೇಟಿಂಗ್ ಅಸೋಶಿಯೇಷನ್ ವತಿಯಿಂದ ನಗರದ ನೆಹರೂ ಕ್ರೀಡಾಂಗಣದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಸ್ಕೇಟಿಂಗ್ ಚಾಂಪಿಯನ್ಶಿಪ್ ಸ್ಪರ್ಧೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ಬಾಲ್ಯದಿಂದ ಮಕ್ಕಳಿಗೆ ಕ್ರೀಡಾಕೂಟಗಳಲ್ಲಿ ಭಾಗವಹಿಸಲು ಆಸಕ್ತಿ ಬೆಳೆಸುವುದರಿಂದ ದೊಡ್ಡವರಾದ ಮೇಲೆ ಒಳ್ಳೆಯ ಕ್ರೀಡಾಪಟುಗಳಾಗಿ ಬೆಳೆಯುವುರದಲ್ಲಿ ಯಾವುದೇ ಸಂದೇಹವಿಲ್ಲ. ಕ್ರೀಡೆಯಲ್ಲಿ ಭಾಗವಹಿಸುವುದರಿಂದ ದೇಹಕ್ಕೆ ಉತ್ತಮ ವ್ಯಾಯಾಮ ದೊರೆಯುವುದರ ಜೊತೆಗೆ ದೇಶಕ್ಕೆ ಗೌರವ ತರುವ ಕ್ರೀಡಾಪಟುಗಳಾಗಿ ರೂಪುಗೊಳ್ಳುತ್ತಾರೆ ಎಂದರು.
ಕರ್ನಾಟಕ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ಜಿಲ್ಲಾಧ್ಯಕ್ಷ ಜಬೀವುಲ್ಲಾ ಮಾತನಾಡಿ, ಜಿಲ್ಲಾ ಮಟ್ಟದ ಸ್ಕೇಟಿಂಗ್ ಚಾಂಪಿಯನ್ಶಿಪ್ ಸ್ಪರ್ಧೆಯಲ್ಲಿ ೬ ರಿಂದ ೧೪ ವರ್ಷದೊಳಗಿನ ಮಕ್ಕಳಿಗೆ ೩೦೦-೫೦೦ ಮೀಟರ್ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ಸುಮಾರು ೯೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ. ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳನ್ನು ಮಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಸ್ಪರ್ಧೆಗೆ ಕಳುಹಿಸಲಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸ್ಕೇಟಿಂಗ್ ಸ್ಪರ್ಧೆಯಲ್ಲಿ ವಿವಿಧ ರೀತಿಯ ಭಂಗಿಗಳನ್ನು ಪ್ರದರ್ಶಿಸಿದ್ದು, ನೋಡುಗರ ಮೆಚ್ಚುಗೆ ಗಳಿಸಿತ್ತು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಕ್ರೀಡಾಪಟುಗಳಾದ ಜಯಚಂದ್ರ ಹಾಗು ಜಯಂತಿ ಗ್ರಾಮದ ನಾರಾಯಣಸ್ವಾಮಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ನಿರ್ಮಲ ಮುನಿರಾಜು, ತಾಲ್ಲೂಕು ಪಂಚಾಯಿತಿ ಸದಸ್ಯೆ ಪಂಕಜಾ ನಿರಂಜನ್, ಕರ್ನಾಟಕ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ಜಿಲ್ಲಾ ಉಪಾಧ್ಯಕ್ಷ ಟಿ.ಟಿ.ನರಸಿಂಹಪ್ಪ, ತಾಲ್ಲೂಕು ಅಧ್ಯಕ್ಷ ಜೆ.ವಿ.ಸುರೇಶ್, ವಸಂತ್ಕುಮಾರ್, ಡಾ. ವೆಂಕಟೇಶ್ಮೂರ್ತಿ, ಮಮತ ಮೂರ್ತಿ, ಹಾಜರಿದ್ದರು.
 

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!