ಮಕ್ಕಳಿಗೆ ಪಾಠ ಪ್ರವಚನ, ಅಕ್ಷರ ಅಭ್ಯಾಸಕ್ಕಿಂತಲೂ ಮಾನವೀಯ ಮೌಲ್ಯಗಳನ್ನು ಬೆಳೆಸುವ ಕೆಲಸ ಶಾಲೆಗಳಲ್ಲಿ ಆಗಬೇಕಿದೆ ಎಂದು ನಾಡೋಜ ಪ್ರಶಸ್ತಿ ಪುರಸ್ಕೃತ ಡಾ.ಮಹೇಶ್ ಜೋಷಿ ತಿಳಿಸಿದರು.
ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ನಿಂದ ನಗರದ ಶ್ರೀಸರಸ್ವತಿ ಕಾನ್ವೆಂಟ್ನಲ್ಲಿ ಬುಧವಾರ ನಡೆದ ಶಾಲೆಗೊಂದು ಕನ್ನಡ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳಲ್ಲಿ ಡಾಕ್ಟರ್, ಇಂಜಿನಿಯರ್, ಸೈನಿಕ, ಐಎಎಸ್, ಐಪಿಎಸ್ ಅಧಿಕಾರಿ ಆಗಬೇಕೆಂಬ ಆಸೆಗಳನ್ನು ಬೆಳೆಸುವುದಕ್ಕೂ ಮೊದಲು ಉತ್ತಮ ನಾಗರೀಕ ಆಗಬೇಕೆಂಬ ಭಾವನೆ ಮಕ್ಕಳಲ್ಲಿ ಬೆಳೆಸಬೇಕಿದೆ ಎಂದು ಹೇಳಿದರು.
ವಿಜ್ಞಾನ ತಂತ್ರಜ್ಞಾನ ಮುಂದುವರೆದ ಈ ಜಗತ್ತಿನಲ್ಲಿ ಮಾನವೀಯ ಮೌಲ್ಯಗಳು ಕುಸಿಯುತ್ತಿದ್ದು ಅದನ್ನು ಬೆಳೆಸುವ ಕೆಲಸ ಎಲ್ಲರಿಂದಲೂ ಆಗಬೇಕಿದೆ ಎಂದು ನುಡಿದರು.
ಈ ನಿಟ್ಟಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ ಶಾಲೆಗೊಂದು ಕನ್ನಡ ಕಾರ್ಯಕ್ರಮದ ಮೂಲಕ ಗಾಂಧಿ, ಅಂಬೇಡ್ಕರ್, ಸ್ವಾಮಿ ವಿವೇಕಾನಂದ, ಬಸವಣ್ಣ, ಕನಕದಾಸರು, ವಾಲ್ಮೀಕಿ ಮುಂತಾದ ಮಹಾನ್ ನಾಯಕರ ಆದರ್ಶ, ತತ್ವಗಳನ್ನು ತಿಳಿಸಿಕೊಡುವ ಯತ್ನ ಮಾಡಬೇಕು ಎಂದರು.
ತಹಸೀಲ್ದಾರ್ ಅಜಿತ್ ಕುಮಾರ್ ರೈ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ರಘುನಾಥರೆಡ್ಡಿ, ಕಸಾಪ ಜಿಲ್ಲಾಧ್ಯಕ್ಷ ಶ್ರೀನಿವಾಸ್, ತಾಲ್ಲೂಕು ಅಧ್ಯಕ್ಷ ಮಂಜುನಾಥ್, ರೈತ ಸಂಘದ ಅಧ್ಯಕ್ಷರಾದ ತಾದೂರು ಮಂಜುನಾಥ್, ರವಿಪ್ರಕಾಶ್, ವಿ.ಸೀತಾಲಕ್ಷ್ಮಿ, ಎನ್.ಶ್ರೀಕಾಂತ್, ಹಾಜರಿದ್ದರು.
- Advertisement -
- Advertisement -
- Advertisement -
- Advertisement -