19.5 C
Sidlaghatta
Sunday, July 20, 2025

ಮಕ್ಕಳು ಆರ್ಥಿಕ ಹಾಗೂ ಹಣಕಾಸಿನ ಬಗ್ಗೆ ತಿಳುವಳಿಕೆ ಹೊಂದಬೇಕು

- Advertisement -
- Advertisement -

ಶಾಲೆಯಲ್ಲಿಯೇ ಮಕ್ಕಳು ಆರ್ಥಿಕ ಹಾಗೂ ಹಣಕಾಸಿನ ಬಗ್ಗೆ ವಿವಿಧ ಚಟುವಟಿಕೆಗಳ ಮೂಲಕ ಕಲಿಯಬೇಕು. ಬ್ಯಾಂಕ್‌ ವ್ಯವಹಾರದ ಬಗ್ಗೆ ಅವಗಾಹನೆಯನ್ನು ಮಕ್ಕಳು ಪಡೆಯುವುದು ಅವಶ್ಯಕ ಎಂದು ತಾಲ್ಲೂಕು ಎಸ್‌ಬಿಐ ಆರ್ಥಿಕ ಸಲಹೆಗಾರ ಡಾ.ಸಿ.ನಾರಾಯಣಸ್ವಾಮಿ ತಿಳಿಸಿದರು.
ತಾಲ್ಲೂಕಿನ ವೈ.ಹುಣಸೇನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಎಸ್‌ಆರ್‌ಇಟಿ ಪ್ರೌಢಶಾಲೆಯಲ್ಲಿ ಶುಕ್ರವಾರ ಶಾಲಾ ವಿದ್ಯಾರ್ಥಿಗಳಿಗೆ ಹಣಕಾಸಿನ ಹಾಗೂ ಬ್ಯಾಂಕ್‌ ವಹಿವಾಟಿನ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸರ್ಕಾರದಿಂದ ಸಿಗುವ ವಿದ್ಯಾರ್ಥಿ ವೇತನ ಈಗ ನೇರವಾಗಿ ವಿದ್ಯಾರ್ಥಿಯ ಬ್ಯಾಂಕ್‌ ಖಾತೆಗೆ ಜಮೆ ಆಗುತ್ತದೆ. ವಿದ್ಯಾರ್ಥಿಗಳು ತಮ್ಮ ಖಾತೆಯನ್ನು ತಾವೇ ನಿರ್ವಹಿಸಲು ಸಮರ್ಥರಾಗಬೇಕು. ಶಾಲೆಗಳಲ್ಲಿ ಕೂಡ ವಿವಿಧ ಚಟುವಟಿಕೆಗಳ ಮೂಲಕ ಶಾಲಾ ಬ್ಯಾಂಕ್‌ ನಡೆಸುವ ಮೂಲಕ ಮಕ್ಕಳಲ್ಲಿ ಹಣಕಾಸಿನ ಬಗ್ಗೆ ಅರಿವು ಬೆಳೆಸಬಹುದಾಗಿದೆ ಎಂದು ಹೇಳಿದರು.
ಶೈಕ್ಷಣಿಕ ಸಾಲ, ನಗದು ರಹಿತ ವ್ಯವಹಾರ, ಆನ್‌ಲೈನ್‌ ಬ್ಯಾಂಕಿಂಗ್‌ ಕುರಿತಂತೆ ಈ ಸಂದರ್ಭದಲ್ಲಿ ಅವರು ವಿವರಿಸಿದರು.
ಮುಖ್ಯ ಶಿಕ್ಷಕ ಗೌರಿಶಂಕರ್‌, ಶಿಕ್ಷಕರಾದ ಎಂ.ಕೃಷ್ಣಪ್ಪ, ಟಿ.ಬಿ.ಬೈರಪ್ಪ, ಹನುಮಂತಪ್ಪ, ವೆಂಕಟೇಶ್‌ನಾಯಕ್‌, ಪಂಕಜ, ನಾಗಚಂದ್ರ, ಕೃಷ್ಣಾರೆಡ್ಡಿ ಕಾರ್ಯಕ್ರಮದಲ್ಲಿ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!