16.1 C
Sidlaghatta
Tuesday, January 21, 2025

ಮಕ್ಕಳ ವ್ಯಕ್ತಿತ್ವ ಬೆಳೆಸಲು ಪಠ್ಯೇತರ ಕಾರ್ಯಕ್ರಮಗಳನ್ನು ಆಯೋಜಿಸಿ

- Advertisement -
- Advertisement -

ಮಕ್ಕಳ ವ್ಯಕ್ತಿತ್ವ ಪರಿಪೂರ್ಣವಾಗಿ ರೂಪುಗೊಳ್ಳಲು ವಿವಿಧ ಚಟುವಟಿಕೆಗಳನ್ನು ಶಾಲೆಗಳಲ್ಲಿ ಆಯೋಜನೆ ಮಾಡಿದಾಗ ಮಾತ್ರ ಸಾಧ್ಯ. ನಮ್ಮ ದೇಶದ ಕಲೆ, ಸಾಹಿತ್ಯ ಸಂಸ್ಕೃತಿ ಪರಂಪರೆಯನ್ನು ಮಕ್ಕಳಿಗೆ ಬಾಲ್ಯದಿಂದಲೇ ತಿಳಿಸಿಕೊಡಬೇಕು ಎಂದು ತಾಲ್ಲೂಕಿನ ಚೀಮಂಗಲದ ಕವಿ ಬಿ.ಆರ್.ಲಕ್ಷ್ಮಣ್ರಾವ್ ಹೇಳಿದರು.
ನಗರದ ಹನುಮಂತಪುರ ಗೇಟ್ನಲ್ಲಿರುವ ಬಿ.ಜಿ.ಎಸ್. ಪಬ್ಲಿಕ್ ಶಾಲೆಯಲ್ಲಿ ಬುಧವಾರ ಆಯೋಜನೆ ಮಾಡಿದ್ದ ಎಥ್ನಿಕ್ ಮತ್ತು ಸಂಸ್ಕೃತಿ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಅವರು ಮಾತನಾಡಿದರು.

ಶಿಡ್ಲಘಟ್ಟ ತಾಲ್ಲೂಕಿನ ಹನುಮಂತಪುರ ಗೇಟ್ನಲ್ಲಿರುವ ಬಿ.ಜಿ.ಎಸ್.ಪಬ್ಲಿಕ್ ಶಾಲೆಯಲ್ಲಿ ಬುಧವಾರ ನಡೆದ   ಎಥ್ನಿಕ್ ದಿನಾಚರಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ನೃತ್ಯ ಪ್ರದರ್ಶಿಸಿದರು.
ಶಿಡ್ಲಘಟ್ಟ ತಾಲ್ಲೂಕಿನ ಹನುಮಂತಪುರ ಗೇಟ್ನಲ್ಲಿರುವ ಬಿ.ಜಿ.ಎಸ್.ಪಬ್ಲಿಕ್ ಶಾಲೆಯಲ್ಲಿ ಬುಧವಾರ ನಡೆದ ಎಥ್ನಿಕ್ ದಿನಾಚರಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ನೃತ್ಯ ಪ್ರದರ್ಶಿಸಿದರು.

ಪ್ರತಿಯೊಂದು ಮಗುವಿನ ಮನಸ್ಸಿನಲ್ಲಿ ತನ್ನ ದೇಶ, ರಾಜ್ಯ, ಕಲೆ, ಸಾಹಿತ್ಯ, ಸಂಸ್ಕೃತಿ, ಪರಂಪರೆಗಳ ಬಗ್ಗೆ ಗೌರವಭಾವನೆ ನೆಲೆಸಬೇಕು. ಅಂಥಹ ಪರಿಸರವನ್ನು ಮಕ್ಕಳ ಪೋಷಕರು ಹಾಗೂ ಶಿಕ್ಷಕರು ಸೃಷ್ಠಿಸಬೇಕು. ಗ್ರಾಮೀಣ ಭಾಗದ ಕ್ರೀಡೆಗಳು, ರೈತರ ಬದುಕಿನ ವಿಶೇಷಗಳು, ಗ್ರಾಮೀಣ ಪ್ರದೇಶಗಳಲ್ಲಿದ್ದಂತಹ ಹಲವಾರು ಸಂಪ್ರದಾಯಗಳು ಕಣ್ಮರೆಯಾಗುತ್ತಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಸಂಸ್ಕೃತಿಗಾಗಿಯೇ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವ ಮೂಲಕ, ಪಾಶ್ಚಿಮಾತ್ಯ ಸಂಸ್ಕೃತಿ ಮತ್ತು ದೇಶೀಯ ಸಂಸ್ಕೃತಿಯ ವ್ಯತ್ಯಾಸಗಳನ್ನು ಮಕ್ಕಳು ತಿಳಿದುಕೊಳ್ಳುತ್ತಾರೆ. ಕೇವಲ ಸಂಸ್ಕೃತಿ ಮಾತ್ರವಲ್ಲದೆ, ಜನಪದ, ನಾಟಕ, ಹರಿಕಥೆಗಳು ಸೇರಿದಂತೆ ಅನೇಕ ಜಾನಪದ ಸೊಬಗುಳ್ಳ ಕಾರ್ಯಕ್ರಮಗಳನ್ನು ಉಳಿಸಿಬೆಳೆಸಬೇಕು ಎಂದರು.
ಬಿ.ಜಿ.ಎಸ್.ಸಂಸ್ಥೆಗಳ ಆಡಳಿತಾಧಿಕಾರಿ ಎನ್.ಶಿವರಾಮರೆಡ್ಡಿ ಮಾತನಾಡಿ, ಮಕ್ಕಳನ್ನು ಕೇವಲ ಅಂಕಗಳನ್ನು ಗಳಿಸಿಕೊಳ್ಳುವಂತಹ ಯಂತ್ರಗಳಂತೆ ಅಲ್ಲದೆ ಅವರನ್ನು ಸಮಾಜದಲ್ಲಿ ಪರಿಪೂರ್ಣವಾದ ವ್ಯಕ್ತಿಯನ್ನಾಗಿ ಮಾಡಬೇಕು. ಪಠ್ಯಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಭಾಗವಹಿಸುವಂತೆ ಅವಕಾಶಗಳನ್ನು ಕಲ್ಪಿಸಿಕೊಡಬೇಕು. ಸಂಪ್ರದಾಯಿಕ ಆಚರಣೆಗಳ ಬಗ್ಗೆ ಶಿಕ್ಷಣ ನೀಡಬೇಕು. ಮಕ್ಕಳ ಮೇಲೆ ಹೆಚ್ಚಿನ ಪ್ರಮಾಣದಲ್ಲಿ ಒತ್ತಡ ಹೇರಬಾರದು. ಶಾಲಾ ಕಾಲೇಜುಗಳಲ್ಲಿ ಇಂತಹ ಕಾರ್ಯಕ್ರಮಗಳನ್ನು ಆಯೋಜನೆ ಮಾಡದಿದ್ದರೆ, ನಮ್ಮ ಸಂಪ್ರದಾಯಗಳು ಇತಿಹಾಸಗಳ ಪುಟಗಳನ್ನು ಸೇರುತ್ತವೆ ಎಂದರು.
ಶಾಲೆಯಲ್ಲಿ ಮಕ್ಕಳಿಂದ ಆಯೋಜನೆ ಮಾಡಲಾಗಿದ್ದ ವಿವಿಧ ಬಗೆಯ ಸಂಪ್ರದಾಯ, ಪರಂಪರೆಗಳನ್ನು ಬಿಂಬಿಸುವಂತಹ ಪ್ರದರ್ಶನವನ್ನು ಚಿಕ್ಕಬಳ್ಳಾಪುರ ಶಾಖಾ ಮಠದ ಮಂಗಳಾನಂದನಾಥ ಸ್ವಾಮೀಜಿ ಚಾಲನೆ ನೀಡಿದರು. ಶಾಲೆಯ ಮಕ್ಕಳು ದೇಶದ ವಿವಿಧ ರಾಜ್ಯಗಳ ಸಾಂಪ್ರದಾಯಿಕ ಉಡುಪುಗಳನ್ನು ಧರಿಸಿ ಸ್ವಾಗತಿಸಿದರು. ದೇಶದ ಪ್ರಮುಖ ಹಬ್ಬಗಳ ಆಚರಣೆಗಳ ಮಾದರಿಗಳನ್ನು ಪ್ರದರ್ಶನ ಎಲ್ಲರ ಗಮನ ಸೆಳೆಯಿತು. ಶಾಲಾ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.
ತಾಲ್ಲೂಕಿನ ಚೀಮಂಗಲದ ಕವಿ ಬಿ.ಆರ್.ಲಕ್ಷ್ಮಣ್ರಾವ್ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಪ್ರಾಂಶುಪಾಲ ಮಹದೇವ, ಚಂದ್ರಶೇಖರ್, ಅಗಲಗುರ್ಕಿಯ ಬಿ.ಜಿ.ಎಸ್ ಪಿ.ಯು.ಕಾಲೇಜಿನ ಡಾ,ಮಧುಸೂದನ್, ಮುಖ್ಯಶಿಕ್ಷಕ ಮೋಹನ್, ವಾರ್ಡನ್ ರಾಜು, ಡಿ.ವೆಂಕಟೇಶ್ ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
error: Content is protected !!