29.1 C
Sidlaghatta
Saturday, March 25, 2023

ಮಡಿವಾಳ ಜನಾಂಗದವರನ್ನು ಪರಿಶಿಷ್ಟ ಜನಾಂಗಕ್ಕೆ ಸೇರಿಸಿ

- Advertisement -
- Advertisement -

ಮಡಿವಾಳ ಜನಾಂಗದವರನ್ನು ಪರಿಶಿಷ್ಟ ಜನಾಂಗಕ್ಕೆ ಸೇರಿಸಬೇಕೆಂದು ಮಡಿವಾಳ ಜನಾಂಗದ ತಾಲ್ಲೂಕು ಅಧ್ಯಕ್ಷ ಮುರಳಿ ಒತ್ತಾಯಿಸಿದರು.
ನಗರದ ದಿಬ್ಬೂರಹಳ್ಳಿ ರಸ್ತೆಯಲ್ಲಿರುವ ಮಡಿವಾಳ ಮಾಚಿದೇವ ತಾಲ್ಲೂಕು ಘಟಕ ಕಚೇರಿಯಲ್ಲಿ ಭಾನುವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಮಡಿವಾಳ ಜನಾಂಗದವರು ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದಿದ್ದು, ಅಭಿವೃದ್ಧಿ ಪಥದೆಡೆಗೆ ಹೆಜ್ಜೆ ಹಾಕಬೇಕಾದ ಅನಿವಾರ್ಯತೆಯಿದೆ. ಚುನಾವಣೆ ಸಮಯದಲ್ಲಿ ಮಾತ್ರ ಜನಾಂಗದವರನ್ನು ಉಪಯೋಗಿಸಿಕೊಳ್ಳಲಾಗುತ್ತಿದೆ. ಇತರ ರಾಜ್ಯಗಳಲ್ಲಿ ಮಡಿವಾಳ ಜನಾಂಗದವರನ್ನು ಪರಿಶಿಷ್ಟ ಜಾತಿಗೆ ಸೇರಿಸಿದ್ದು, ಕರ್ನಾಟಕದಲ್ಲಿಯೂ ಸಹ ಮಡಿವಾಳ ಜನಾಂಗದವರನ್ನು ಪರಿಶಿಷ್ಟ ಜನಾಂಗಕ್ಕೆ ಸೇರಿಸಬೇಕು. ಮಡಿವಾಳ ಜನಾಂಗಕ್ಕೆ ಎಲ್ಲ ರಂಗಗಳಲ್ಲೂ ಸಹ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿದರು.
ದೇವರಾಜ ಅರಸ್ ಹಿಂದುಳಿದ ನಿಗಮದಿಂದ ಮಡಿವಾಳ ಜನಾಂಗಕ್ಕೆ ನೀಡುತ್ತಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಿ ಎಂದು ತಿಳಿಸಿದರು.
ಮಡಿವಾಳ ಮಾಚಿದೇವ ಜಯಂತಿಯನ್ನು ಪ್ರಾರಂಭ ಮಾಡಿರುವ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೃತಜ್ಞತೆ ತಿಳಿಸಿದ ಅವರು ಫೆಬ್ರವರಿ ೧ ರಂದು ನಡೆಯುವ ಮಡಿವಾಳ ಮಾಚಿದೇವ ಜಯಂತಿಯನ್ನು ಕುಲಭಾಂದವರು ಒಗಟ್ಟಾಗಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ತಿಳಿಸಿದರು.
ಮಡಿವಾಳ ಮಾಚಿದೇವ ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಪದ್ಮಾವತಮ್ಮ, ಗೌರವಾಧ್ಯಕ್ಷ ಓಬಣ್ಣ, ತಾಲ್ಲೂಕು ಗೌರವಾಧ್ಯಕ್ಷ ವೆಂಕಟಸ್ವಾಮಿ, ಗೋವಿಂದರಾಜು, ಎಂ.ಅಂಬರೀಶ್, ರಾಮಾಂಜಿನಪ್ಪ, ರಮೇಶ್, ಸುರೇಶ್, ಮಂಜುಳಮ್ಮ ಹಾಜರಿದ್ದರು.

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.
Captcha verification failed!
CAPTCHA user score failed. Please contact us!
error: Content is protected !!