ಮಡಿವಾಳ ಜನಾಂಗವನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಅವರಿಗೆ ಮಡಿವಾಳ ಮಾಚಿದೇವ ಸಂಘದಿಂದ ಮನವಿ ಕೊಡುತ್ತಿದ್ದೇವೆ ಎಂದು ರಾಜ್ಯ ಘಟಕದ ಉಪಾಧ್ಯಕ್ಷ ರಾಜಣ್ಣ ಹೇಳಿದರು.
ನಗರದ ಪ್ರವಾಸಿಮಂದಿರದ ಆವರಣದಿಂದ ಗುರುವಾರ ಬೈಕ್ ರ್ಯಾಲಿಯ ಮೂಲಕ ತೆರಳಲು ಚಾಲನೆ ನೀಡಿ ಅವರು ಮಾತನಾಡಿದರು.
ಮಡಿವಾಳ ಜನಾಂಗವು ಶೈಕ್ಷಣಿಕ, ಆರ್ಥಿಕ, ರಾಜಕೀಯ ಹಾಗೂ ಸಾಮಾಜಿಕವಾಗಿ ಹಿಂದುಳಿದಿದೆ. ಮಡಿವಾಳ ಜನಾಂಗವನ್ನು ಪರಿಶಿಷ್ಟ ಜಾತಿಗೆ ಸೇರಿಸಬೇಕು ಎಂದು ಸುಮಾರು 13 ವರ್ಷಗಳಿಂದ ಒತ್ತಾಯಿಸುತ್ತಾ ಬಂದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ.
ಹಿಂದಿನ ಸರ್ಕಾರವು ಏಕಸದಸ್ಯ ಆಯೋಗವನ್ನು ರಚಿಸಿ ಡಾ.ಅನ್ನಪೂರ್ಣಮ್ಮ ವರದಿ ತಯಾರಿಸಿದ್ದು, ಅದನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿಲ್ಲ. ದೇಶದ 18 ರಾಜ್ಯದಲ್ಲಿ ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸಿ ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ಸಾಂವಿಧಾನಿಕ ಸ್ಥಾನಮಾನ ನೀಡಲಾಗಿದೆ. ಅದೇ ರೀತಿಯಲ್ಲಿ ನಮ್ಮ ರಾಜ್ಯದಲ್ಲಿಯೂ ಅವಕಾಶವನ್ನು ಕಲ್ಪಿಸಿಕೊಡಬೇಕು ಎಂದು ಆಗ್ರಹಿಸಿದರು.
ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರ್ಪಡೆಗೊಳಿಸುವ ಅನುಮೋದನೆಯನ್ನು ಕೂಡಲೇ ಶಿಫಾರಸು ಮಾಡಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.
ಸಮುದಾಯದ 50 ಕ್ಕೂ ಹೆಚ್ಚು ಮಂದಿ ಬೈಕುಗಳ ಮೂಲಕ ಚಿಕ್ಕಬಳ್ಳಾಪುರಕ್ಕೆ ತೆರಳಿದರು
- Advertisement -
- Advertisement -
- Advertisement -
- Advertisement -