15.1 C
Sidlaghatta
Tuesday, December 9, 2025

ಮತದಾನದ ಅರಿವು ಮೂಡಿಸಲು ರಂಗೋಲಿ ಸ್ಪರ್ಧೆ

- Advertisement -
- Advertisement -

ನಗರದಲ್ಲಿ ನಗರಸಭೆಯ ಬಳಿ ಗುರುವಾರ ಜಿಲ್ಲಾ ಸ್ವೀಪ್‌ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕರ್ನಾಟಕ ವಿಧಾನಸಭಾ ಚುನಾವಣೆ 2018 ರ ಸ್ವೀಪ್‌ ಕಾರ್ಯಕ್ರಮದ ಸಂಬಂಧ ಮತದಾನದ ಅರಿವು ಮೂಡಿಸಲು ಆಯೋಜಿಸಿದ್ದ ತಾಲ್ಲೂಕು ಮಟ್ಟದ ರಂಗೋಲಿ ಸ್ಪರ್ಧೆಗೆ ಚಾಲನೆ ನೀಡಿ ಚುನಾವಣಾಧಿಕಾರಿ ಮಲ್ಲಿಕಾರ್ಜುನ್ ಮಾತನಾಡಿದರು.
ಮತದಾರರು ಕಡ್ಡಾಯವಾಗಿ ತಪ್ಪದೇ ಮತದಾನ ಮಾಡುವ ಬಗ್ಗೆ ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಡೆದ ಮತದಾನ ಪ್ರಮಾಣಕ್ಕಿಂತ ಈ ಬಾರಿ ಹೆಚ್ಚಾಗಬೇಕು. ನಿಮ್ಮ ಮತ ನಿಮ್ಮ ಹಕ್ಕು ತಪ್ಪದೇ ನಿಮ್ಮ ಮತ ಚಲಾಯಿಸಿ, ಆಸೆ ಆಮಿಷಗಳಿಗೆ ಒಳಗಾಗದೇ ಉತ್ತಮ ಪ್ರತಿನಿಧಿಯನ್ನು ಆಯ್ಕೆ ಮಾಡಿ ಎಂದು ತಿಳಿಸುತ್ತಿದ್ದೇವೆ. ಮತದಾನದ ಶೇಕಡಾ ಪ್ರಮಾಣ ಹೆಚ್ಚಿಸಲು, ನೈತಿಕ ಮತ್ತು ಕಡ್ಡಾಯ ಮತದಾನಕ್ಕೆ ಉತ್ತೇಜಿಸುವ ದೃಷ್ಟಿಯಿಂದ ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದಾಗಿ ಅವರು ತಿಳಿಸಿದರು.
ಮತದಾನ ಮತದಾರರ ಅಭಿಪ್ರಾಯಕ್ಕೊಂದು ಅಮೂಲ್ಯ ಅವಕಾಶವಾಗಿದ್ದು ಪ್ರತಿಯೊಬ್ಬರೂ ಮತದಾನ ಮಾಡಬೇಕು, ನಾಗರಿಕರೂ ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೇ ಉತ್ತಮ ಅಭ್ಯರ್ಥಿಯನ್ನು ಆಯ್ಕೆ ಮಾಡಿಕೊಳ್ಳಲು ಚುನಾವಣೆ ಸಹಕಾರಿಯಾಗಿರುತ್ತದೆ. ಹಾಗಾಗಿ ಪ್ರತಿಯೊಬ್ಬರೂ ಮತಗಟ್ಟೆಗೆ ತಮ್ಮ ಗುರುತಿನ ಚೀಟಿಯೊಂದಿಗೆ ಬಂದು ಉತ್ತಮ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು ಎಂದರು.
ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ನೀಡಲಾಯಿತು.
ಸಹಾಯಕ ಚುನಾವಣಾಧಿಕಾರಿ ಅಜಿತ್‌ಕುಮಾರ್ ರೈ, ಚುನಾವಣಾ ಶಾಖೆಯ ಸಂಪರ್ಕಾಧಿಕಾರಿ ಶ್ರೀನಾಥ್‌ಗೌಡ, ನಗರಸಭೆ ಪೌರಾಯುಕ್ತ ಜಿ.ಎನ್.ಚಲಪತಿ, ಸಿಡಿಪಿಒ ಅಧಿಕಾರಿ ಲಕ್ಷ್ಮೀದೇವಮ್ಮ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಚಂದ್ರಶೇಖರಬಾಬು ಹಾಜರಿದ್ದರು.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!