ನಗರದ ಸರ್ಕಾರಿ ಜೂನಿಯರ್ ಕಾಲೇಜು ಆವರಣದಲ್ಲಿ ಸೋಮವಾರ ಚುನಾವಣಾ ಸ್ವೀಪ್ ಸಮಿತಿಯ ನೇತೃತ್ವದಲ್ಲಿ ಬೈಕ್ ರ್ಯಾಲಿ ಮೂಲಕ ಮತದಾನದ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಚುನಾವಣಾಧಿಕಾರಿ ಮಲ್ಲಿಕಾರ್ಜುನ್ ಮಾತನಾಡಿದರು.
ಮತದಾನ ಪ್ರತಿಯೊಬ್ಬ ಜವಾಬ್ದಾರಿಯುತ ನಾಗರಿಕರ ಕರ್ತವ್ಯವಾಗಿದೆ. ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಅವರು ತಿಳಿಸಿದರು.
ಮತದಾನ ಮತದಾರರ ಅಭಿಪ್ರಾಯಕ್ಕೊಂದು ಅಮೂಲ್ಯ ಅವಕಾಶವಾಗಿದ್ದು ಪ್ರತಿಯೊಬ್ಬರೂ ಮತದಾನ ಮಾಡಬೇಕು, ನಾಗರಿಕರೂ ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೇ ಉತ್ತಮ ಅಭ್ಯರ್ಥಿಯನ್ನು ಆಯ್ಕೆ ಮಾಡಿಕೊಳ್ಳಲು ಚುನಾವಣೆ ಸಹಕಾರಿಯಾಗಿರುತ್ತದೆ. ಹಾಗಾಗಿ ಪ್ರತಿಯೊಬ್ಬರೂ ಮತಗಟ್ಟೆಗೆ ತಮ್ಮ ಗುರುತಿನ ಚೀಟಿಯೊಂದಿಗೆ ಬಂದು ಉತ್ತಮ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು ಎಂದರು.
ನಗರದ ಪ್ರಮುಖ ಬೀದಿಗಳಲ್ಲಿ ‘ಮತ ಹಾಕಿದವನೇ ಹೀರೋ’, ‘ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಿ’ ಎಂಬ ಘೋಷಣೆಗಳೊಂದಿಗೆ ಬೈಕ್ ರ್ಯಾಲಿ ಮೂಲಕ ಅಧಿಕಾರಿಗಳು ನಾಗರಿಕರಿಗೆ ಅರಿವು ಮೂಡಿಸುವ ಕೆಲಸ ಮಾಡಿದರು.
ಸಹಾಯಕ ಚುನಾವಣಾಧಿಕಾರಿ ಅಜಿತ್ಕುಮಾರ್ ರೈ, ತಾಲ್ಲೂಕು ಪಂಚಾಯಿತಿ ಇಓ ಎಂ.ವೆಂಕಟೇಶ್, ಚುನಾವಣಾ ಶಾಖೆಯ ಸಂಪರ್ಕಾಧಿಕಾರಿ ಶ್ರೀನಾಥ್ಗೌಡ, ನಗರಸಭೆ ಪೌರಾಯುಕ್ತ ಜಿ.ಎನ್.ಚಲಪತಿ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಚಂದ್ರಶೇಖರಬಾಬು ಹಾಜರಿದ್ದರು.
- Advertisement -
- Advertisement -
- Advertisement -