ಹೆಚ್ಚು ಗಿಡ ನೆಡುವ ಮೂಲಕ ಪರಿಸರ ಸಮತೋಲನ ಕಾಪಾಡಬೇಕು. ಪ್ಲಾಸ್ಟಿಕ್ ಬಳಕೆ ಮಾಡಬೇಡಿ ಎಂದು ಸಿವಿಲ್ ನ್ಯಾಯಾಧೀಶರಾದ ಎನ್.ಎ.ಶ್ರೀಕಂಠ ತಿಳಿಸಿದರು.
ನಗರದ ನ್ಯಾಯಾಲಯದ ಆವರಣದಲ್ಲಿ ಭಾನುವಾರ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಅರಣ್ಯ ಇಲಾಖೆಯ ಸಹಯೋಗದೊಂದಿಗೆ ನಡೆದ ವಿಶ್ವ ಪರಿಸರ ದಿನಾಚರಣೆಯನ್ನು ಗಿಡ ನೆಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ನೀರು ಹಾಗೂ ನೈಸರ್ಗಿಕ ಸಂಪತ್ತು ಉಳಿಸಿಕೊಳ್ಳಬೇಕಾದರೆ ಪರಿಸರ ಸಂರಕ್ಷಣೆ ಮಾಡಬೇಕಿದೆ. ಪ್ರತಿಯೊಬ್ಬರೂ ತಮ್ಮ ಮನೆಗಳ ಮುಂದೆ ಒಂದು ಗಿಡ ನೆಟ್ಟು ಬೆಳೆಸಿದರೆ ಶುದ್ಧ ಗಾಳಿ ಸಿಗುವ ಜೊತೆಗೆ ಪರಿಸರ ಸಂರಕ್ಷಣೆ ಮಾಡಿದಂತಾಗುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ನ್ಯಾಯಾಲಯದ ಆವರಣದಲ್ಲಿ ಸಸಿಗಳನ್ನು ನೆಡಲಾಯಿತು.
ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಎಂ.ಪಾಪಿರೆಡ್ಡಿ, ವಕೀಲರಾದ ಆರ್.ವಿ.ವೀಣಾ, ಕೆ.ಮಂಜುನಾಥ್, ಶಿರಸ್ತೆದಾರ ಎ.ದೇವರಾಜ್, ಅರಣ್ಯ ಇಲಾಖೆಯ ವಿಜಯಕುಮಾರ್ ಮತ್ತಿತರರು ಹಾಜರಿದ್ದರು.
- Advertisement -
- Advertisement -
- Advertisement -







