ತಾಲ್ಲೂಕಿನ ಕೊತ್ತನೂರು ಗ್ರಾಮದಲ್ಲಿ ಮನೆಯೊಂದರ ಹಿತ್ತಲಿನ ಬಾಳೆಗಿಡದಲ್ಲಿ ಬುಧವಾರ ಕಂಡು ಬಂದ ಹಸಿರುಹಾವನ್ನು ಅದೇ ಗ್ರಾಮದ ಸ್ನೇಕ್ ನಾಗರಾಜ್ ರಕ್ಷಿಸಿ ಸುರಕ್ಷಿತ ಸ್ಥಳದಲ್ಲಿ ಬಿಟ್ಟಿದ್ದಾರೆ.
ಗ್ರೀನ್ ವೈನ್ ಸ್ನೇಕ್ ಎಂದು ಕರೆಯುವ ಅಚ್ಚ ಹಸಿರು ಬಣ್ಣದ ಹಸಿರಾವು ನೋಡಲು ಸುಂದರವಾದ ಹಾವು. ಹಸಿರು ಬಣ್ಣದ ಮರಗಿಡಗಳ ಕಾಂಡಗಳಲ್ಲಿರುವ ಅದನ್ನು ಗುರುತಿಸುವುದು ಕಷ್ಟ. ಅದನ್ನು ಕಡ್ಡಿಯೊಂದರ ಮೇಲೆ ಸ್ನೇಕ್ ನಾಗರಾಜ್ ಹತ್ತಿಸಿದಾಗ ಸಾಧುವಂತೆ ಕಂಡ ಹಾವು, ಅದರ ಫೋಟೋ ತೆಗೆಯಲು ಹೋದೊಡನೆ ಲೆನ್ಸ್ನಲ್ಲಿ ಕಂಡ ತನ್ನ ಪ್ರತಿಬಿಂಬವನ್ನು ಕಂಡು ಭುಸುಗುಡತೊಡಗಿತು. ಅದರ ಆ ಪ್ರತಿಕ್ರಿಯೆಯಿಂದ ಉತ್ತಮ ಚಿತ್ರ ದಾಖಲಾಯಿತು.
‘ನಾಗರಹಾವನ್ನು ಕಂಡಲ್ಲಿ ಮಾತ್ರ ಜನರು ನನ್ನನ್ನು ಕರೆಯುತ್ತಾರೆ. ಉಳಿದ ಯಾವುದೇ ಹಾವನ್ನು ಕಂಡರೂ ತಾವೇ ಕೋಲೆತ್ತಿ ಕೊಂದು ಬಿಡುತ್ತಾರೆ. ಈ ರೀತಿಯ ವಿಷವಿಲ್ಲದ ಹಾವನ್ನು ಕಂಡರೆ ಕರೆಯುವವರು ಅಪರೂಪ. ಯಾವ ಹಾವಾದರೂ ಸರಿ ಅಕಸ್ಮಾತಾಗಿ ಮನುಷ್ಯರ ವಾಸಸ್ಥಾನದ ಬಳಿ ಬರುತ್ತವೆಯಷ್ಟೆ. ಅವನ್ನು ಸುರಕ್ಷಿತವಾಗಿ ಅವುಗಳ ವಾಸಸ್ಥಾನದಲ್ಲಿ ಬಿಡಬೇಕು. ಅವೂ ಕೂಡ ನಮ್ಮಂತೆಯೇ ಜೀವಿಗಳು’ ಎನ್ನುತ್ತಾರೆ ಸ್ನೇಕ್ ನಾಗರಾಜ್.
’ಹಸಿರು ಹಾವು ವಿಷಕಾರಿ ಅಲ್ಲ. ಆದರೂ ಅದು ಭುಸುಗುಡುತ್ತದೆ ಮತ್ತು ಕಚ್ಚುತ್ತದೆ. ಇದರ ಆಹಾರವಾದ ಕಪ್ಪೆ, ಹಲ್ಲಿ ಮುಂತಾದವನ್ನು ಕೊಲ್ಲಲು ಇದರಲ್ಲಿ ಸ್ವಲ್ಪ ಮಟ್ಟದ ವಿಷ ಇರುತ್ತದೆ. ಇದು ಮನುಷ್ಯರಿಗೆ ಕಚ್ಚಿದಲ್ಲಿ ಊತ ಕಾಣಿಸಿಕೊಳ್ಳುತ್ತದೆ. ಯಾವುದೇ ಅಪಾಯವಿಲ್ಲ’ ಎಂದು ಅವರು ಹೇಳಿದರು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -