Home News ಮರಕ್ಕೆ ಡಿಕ್ಕಿಹೊಡೆದ ಬಸ್

ಮರಕ್ಕೆ ಡಿಕ್ಕಿಹೊಡೆದ ಬಸ್

0

ತಾಲ್ಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬೈಯಪ್ಪನಹಳ್ಳಿಯ ಬಳಿ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ಮರಗಳಿಗೆ ಡಿಕ್ಕಿಹೊಡೆದಿರುವ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡು, 15 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ತಾಲ್ಲೂಕಿನ ಬೈಯಪ್ಪನಹಳ್ಳಿಯ ಬಳಿ ಮಿಟ್ಟೆಮರಿಯಿಂದ ಬೆಂಗಳೂರಿನ ದೊಮ್ಮಸಂದ್ರಕ್ಕೆ ಮದುವೆಗೆ ಹೋಗಿ ಬರುತ್ತಿದ್ದ ಬಸ್ಸು ಬುಧವಾರ ಮಧ್ಯರಾತ್ರಿ 12 ಗಂಟೆಯ ಸುಮಾರಿಗೆ ರಸ್ತೆಯ ಬದಿಯಿದ್ದ ಮರಗಳಿಗೆ ಡಿಕ್ಕಿಹೊಡೆದಿದೆ.
ಬಸ್ಸು ಡಿಕ್ಕಿ ಹೊಡೆದಿರುವ ರಭಸಕ್ಕೆ ಎರಡು ಮರಗಳು ಮುರಿದು ಬಿದ್ದಿದ್ದು, ಬಸ್ಸಿನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ. ಬಸ್ಸಿನಲ್ಲಿದ್ದ ಜನರಲ್ಲಿ ಇಬ್ಬರಿಗೆ ಗಂಭೀರವಾಗಿ ಗಾಯಗಳಾಗಿವೆ. 15 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು, ಕೆಲವರನ್ನು ಮಿಟ್ಟೆಮರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕೆಲವರನ್ನು ಶಿಡ್ಲಘಟ್ಟದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ.
ರಾತ್ರಿಯಲ್ಲಿ ಚಾಲಕ ನಿದ್ರೆಗೆ ಜಾರಿದ್ದರಿಂದ ಈ ಅವಘಡ ಸಂಭವಿಸಿರಬಹುದೆಂದು ಸ್ಥಳೀಯ ನಾಗರಿಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಜೆಸಿಬಿ.ಮತ್ತು ಕ್ರೇನ್ ಗಳ ಸಹಾಯದಿಂದ ಬಸ್ಸನ್ನು ಮೇಲಕ್ಕೆತ್ತಲಾಗಿದೆ. ಸ್ಥಳಕ್ಕೆ ದಿಬ್ಬೂರಹಳ್ಳಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.