ತಾಲೂಕಿನಾದ್ಯಂತ ಎಗ್ಗಿಲ್ಲದೇ ಸಾಗಿದ್ದ ಮರಳು ಸಾಗಾಣಿಕೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ತಾಲ್ಲೂಕು ಆಡಳಿತ ಹಾಗೂ ಪೊಲೀಸ್ ಇಲಾಖೆ ಜಂಟಿಯಾಗಿ ಭಾನುವಾರ ನಡೆಸಿದ ಕಾರ್ಯಾಚರಣೆಯಿಂದ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಏಳು ಟ್ರಾಕ್ಟರ್ಗಳನ್ನು ವಶಪಡಿಸಿಕೊಂಡು ದಂಡ ವಿಧಿಸಿರುವ ಘಟನೆ ನಡೆದಿದೆ.
ತಾಲ್ಲೂಕಿನಲ್ಲಿ ಅಕ್ರಮವಾಗಿ ಮರುಳು ಸಾಗಾಣಿಕೆ ಮಾಡಲಾಗುತ್ತಿದೆ ಎಂಬ ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ತಹಸೀಲ್ದಾರ್ ಕೆ.ಎಂ.ಮನೋರಮಾ ನೇತೃತ್ವದ ಸಿಬ್ಬಂದಿ ತಾಲ್ಲೂಕಿನ ವಿವಿದೆಡೆ ದಾಳಿ ನಡೆಸಿ ಏಳು ಟ್ರಾಕ್ಟರ್ಗಳನ್ನು ವಶಪಡಿಸಿಕೊಂಡಿದ್ದಾರೆ.
ತಹಸೀಲ್ದಾರ್ ಕೆ.ಎಂ.ಮನೋರಮಾ, ಗ್ರಾಮ ಲೆಕ್ಕಿಗರಾದ ಲಾರೆನ್ಸ್, ಆನಂದ್, ನಗರಠಾಣೆ ಪಿಎಸ್ಸೈ ವಿಜಯ್ ಮತ್ತಿತರರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
- Advertisement -
- Advertisement -
- Advertisement -
- Advertisement -