22.1 C
Sidlaghatta
Monday, October 27, 2025

ಮಲೇರಿಯಾ ಮಾಸಾಚರಣೆ ಜಾಥಾ

- Advertisement -
- Advertisement -

ಮಲೇರಿಯಾ ಮಾಸಾಚರಣೆಯ ಅಂಗವಾಗಿ ಬುಧವಾರ ತಾಲ್ಲೂಕು ಆರೋಗ್ಯ ಇಲಾಖೆ, ನಗರಸಭೆ ಹಾಗೂ ಸರಸ್ವತಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ನಗರದಲ್ಲಿ ಜಾಥಾ ನಡೆಸಿದರು.
ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಅನಿಲ್ ಕುಮಾರ್ ಮಾತನಾಡಿ ‘ಯಾವುದೇ ಜ್ವರವಿರಲಿ ಉದಾಸೀನ ಮಾಡದೇ ತಕ್ಷಣ ರಕ್ತಪರೀಕ್ಷೆ ಮಾಡಿಸಿ ಚಿಕಿತ್ಸೆ ಪಡೆಯಬೇಕು. ಸಾರ್ವಜನಿಕ ಆಸ್ಪತ್ರೆಯಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು. ನಿಂತ ನೀರಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುವುದರಿಂದ ಮನೆಯ ಸುತ್ತ ಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ನೀರು ಶೇಖರಿಸುವ ಡ್ರಮ್ ಅಥವಾ ತೊಟ್ಟಿಗಳನ್ನು ಭದ್ರವಾದ ಮುಚ್ಚಳ ಹಾಕಿ ಮುಚ್ಚಬೇಕು. ವಾರಕ್ಕೊಮ್ಮೆ ನೀರು ಶೇಖರಣಾ ಡ್ರಮ್ ಖಾಲಿ ಮಾಡಿ, ಒಣಗಿಸಿ ಭರ್ತಿ ಮಾಡಬೇಕು. ಸೊಳ್ಳೆ ಪರದೆಯನ್ನು ಉಪಯೋಗಿಸಬೇಕು’ ಎಂದು ತಿಳಿಸಿದರು.
ನಗರದಲ್ಲಿ ಜಾಥಾ ನಡೆಸಿದ ವಿದ್ಯಾರ್ಥಿಗಳು ಘೋಷಣೆಗಳನ್ನು ಕೂಗುತ್ತಾ ಕರಪತ್ರಗಳನ್ನು ಹಂಚಿದರು.
ಡಾ.ಶೀಲಾ, ಡಾ.ವಿಜಯಕುಮಾರ್, ಸಮೀವುಲ್ಲಾ, ಕಿರಣ್ಕುಮಾರ್, ವಿಂದ್ಯಾ, ಎ.ಎನ್.ಎಂ ವಿಜಯಾ, ಆದಮ್ಮ, ದಾದಾಪೀರ್, ನಗರಸಭೆ ಅಧಿಕಾರಿ ಬಾಲಚಂದ್ರ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!