28.1 C
Sidlaghatta
Wednesday, February 18, 2026

ಮಳ್ಳೂರಾಂಭ ದೇವಿಯ ರಥೋತ್ಸವ

- Advertisement -
- Advertisement -

ತಾಲ್ಲೂಕಿನ ದೇವರಮಳ್ಳೂರು ಗ್ರಾಮದಲ್ಲಿ ಮಂಗಳವಾರ ಮಳ್ಳೂರಾಂಭ ದೇವಿಯ ರಥೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ಅತ್ಯಂತ ಪುರಾತನ ದೇವಾಲಯವಾದ ಮಳ್ಳೂರಾಂಭ ದೇವಾಲಯದ ರಥೋತ್ಸವವು ಜಿಲ್ಲೆಯಾದ್ಯಂತ ಪ್ರಸಿದ್ಧವಾಗಿದ್ದು, ಧನುರ್ಮಾಸ ಹುಣ್ಣಿಮೆಯ ವಿಶೇಷವಾಗಿದೆ.
ವಿವಿಧ ತಾಲ್ಲೂಕುಗಳಿಂದ ಆಗಮಿಸಿದ್ದ ಜನರು ದೇವಿಯ ದರ್ಶನ ಪಡೆದು ಪೂಜೆಯಲ್ಲಿ ಪಾಲ್ಗೊಂಡು ರಥವನ್ನು ಎಳೆದರು. ದೇವರನ್ನು ವಿಶೇಷವಾಗಿ ಅಲಕರಿಸಿದ್ದರು. ಬ್ರಹ್ಮರಥೋತ್ಸವಕ್ಕೆ ರಥವನ್ನು ವಿಶೇಷವಾಗಿ ಅಲಂಕರಿಸಿ ದಾರಿಯುದ್ದಕ್ಕೂ ತಳಿರು ತೋರಣಗಳಿಂದ ಸಿಂಗರಿಸಿದ್ದರು. ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು.
ವಿವಿಧ ಕಲಾತಂಡಗಳೊಂದಿಗೆ ವೀರಗಾಸೆ, ತಮಟೆ ವಾದನ ಆಕರ್ಷಕವಾಗಿತ್ತು. ತಿಂಡಿ ತಿನಿಸುಗಳು, ಆಟಿಕೆಗಳು, ಅಚ್ಚೆ ಹಾಕುವವರು, ದಿನೋಪಯೋಗಿ ವಸ್ತುಗಳು ಸೇರಿದಂತೆ ಬಹುತೇಕ ಅಂಗಡಿಗಳು ತೆರೆದಿದ್ದು ಜನಾಕರ್ಷಕವಾಗಿದ್ದವು.
ಶಾಸಕ ಎಂ.ರಾಜಣ್ಣ ಮತ್ತು ಶಿರಸ್ತೆದಾರ್‌ ವಾಸುದೇವಮೂರ್ತಿ ರಥೋತ್ಸವಕ್ಕೆ ಚಾಲನೆ ನೀಡಿದರು. ಕೋಚಿಮುಲ್‌ ನಿರ್ದೇಶಕ ಬಂಕ್‌ ಮುನಿಯಪ್ಪ, ಡಿ.ಎ.ಮಳ್ಳೂರಯ್ಯ, ರೆಡ್ಡಿಸ್ವಾಮಿ, ಆಂಜನೇಯರೆಡ್ಡಿ, ಚಲಪತಿ, ನಾರಾಯಣಪ್ಪ, ಎ.ವೆಂಕೋಬರಾವ್‌, ಕೆಂಪಣ್ಣ, ಗೋವಿಂದರಾಜು, ದ್ಯಾವಪ್ಪ ಮತ್ತಿತರರು ಪೂಜಾಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!