ತಾಲ್ಲೂಕಿನ ಚೌಡಸಂದ್ರ ಗ್ರಾಮದ ಮಹಾಗಣಪತಿ, ಛಾಯಾದೇವಿ ಮತ್ತು ಶನೇಶ್ವರಸ್ವಾಮಿ ದೇವಸ್ಥಾನದಲ್ಲಿ ಶನಿವಾರ 15ನೇ ವರ್ಷದ ವಾರ್ಷಿಕೋತ್ಸವವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ವಿಶೇಷ ಪೂಜಾ ಕೈಂಕರ್ಯಗಳಿಗೆ ಗ್ರಾಮದ ಎಲ್ಲಾ ಮನೆಗಳಿಂದಲೂ ತಂಬಿಟ್ಟು ದೀಪಗಳನ್ನು ಹೊತ್ತು ಮಹಿಳೆಯರು ಮೆರವಣಿಗೆಯಲ್ಲಿ ಸಾಗಿ ಭಾಗವಹಿಸಿದರು. ದೇವರಿಗೆ ಬೆಣ್ಣೆ ಅಲಂಕಾರ ಮತ್ತು ವಿವಿಧ ಹೂಗಳಿಂದ ಅಲಂಕರಿಸಲಾಗಿತ್ತು. ಸುತ್ತಮುತ್ತಲಿನ ಗ್ರಾಮಗಳಿಂದ ಭಕ್ತರು ಆಗಮಿಸಿ ಪೂಜೆಯಲ್ಲಿ ಪಾಲ್ಗೊಂಡರು. ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಲಾಯಿತು.
ಮಳಮಾಚನಹಳ್ಳಿ, ಮೇಲೂರು, ವರದನಾಯಕನಹಳ್ಳಿ, ಅಪ್ಪೇಗೌಡನಹಳ್ಳಿ, ಚೌಡಸಂದ್ರ, ದೇವರಮಳ್ಳೂರು, ಬಳುವನಹಳ್ಳಿ, ಕೇಶವಾರ ಗ್ರಾಮಗಳ ಬಜನಾ ತಂಡಗಳು ಭಜನೆ ಹಾಗೂ ಭಕ್ತಿಗೀತೆಗಳ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
- Advertisement -
- Advertisement -
- Advertisement -
- Advertisement -