ಮಹಿಳೆ ಶಿಕ್ಷಣವಂತಳಾದರೆ, ಆ ಮನೆ ಸಂಸ್ಕೃತಿ ಸಂಸ್ಕಾರದಿಂದ ಕೂಡಿರುತ್ತದೆ ಎಂದು ತಹಶೀಲ್ದಾರ್ ಜಿ.ಎ.ನಾರಾಯಣಸ್ವಾಮಿ ತಿಳಿಸಿದರು.
ತಾಲ್ಲೂಕಿನ ಕೊತ್ತನೂರು ಗ್ರಾಮದಲ್ಲಿ ಶನಿವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ದುರ್ಬಲ ವರ್ಗದ ಮಹಿಳೆಯರ ಸಬಲೀಕರಣಕ್ಕಾಗಿ ೫೦ಜನ ಸದಸ್ಯರನ್ನೊಳಗೊಂಡ ಗಜಲಕ್ಷ್ಮಿ ಮಹಿಳಾ ಜ್ಞಾನ ವಿಕಾಸ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತಾಡಿದರು.
ತಿಂಗಳಲ್ಲಿ ಅರ್ಧ ದಿನ ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ, ತರಬೇತಿ, ಸದಸ್ಯರೊಡನೆ ವಿಚಾರ ವಿನಿಮಯ, ಅಧ್ಯಯನ ಪ್ರವಾಸ ಮುಂತಾದ ಕಾರ್ಯಕ್ರಮಗಳ ಮುಖೇನ ಮಹಿಳಾ ಸಬಲೀಕರಣದೆಡೆಗೆ ಸಾಗುತಿರುವ ಜ್ಞಾನ ವಿಕಾಸ ಕಾರ್ಯಕ್ರಮವನ್ನು ಸದುಪಯೋಗ ಪಡಿಸಿಕೊಂಡು ಸಬಲೀಕರಣದೆಡೆಗೆ ಹೆಜ್ಜೆ ಹಾಕುವಂತೆ ತಿಳಿಸಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ರಾಧಕೃಷ್ಣರಾವ್ ಮಾತನಾಡಿ ಮಹಿಳೆಯರು ತಮ್ಮ ಬಿಡುವಿಲ್ಲದ ಕೆಲಸದ ನಡುವೆ ತಿಂಗಳಲ್ಲಿ ಒಂದು ದಿನ ಈ ಜ್ಞಾನ ವಿಕಾಸ ಕೇಂದ್ರದ ಸಭೆಯಲ್ಲಿ ಭಾಗವಹಿಸಿ. ಇಲ್ಲಿ ಸಿಗುವ ಆರೋಗ್ಯ, ಕಾನೂನು, ಪೌಷ್ಠಿಕ ಆಹಾರ ಹಾಗೂ ಹಲವು ಮಾಹಿತಿಗಳನ್ನು ಪಡೆದುಕೊಂಡು ಉತ್ತಮಜೀವನದೆಡೆಗೆ ಸಾಗುವಂತೆ ತಿಳಿಸಿದರು.
ತಾಲ್ಲೂಕಿನ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಯೋಗಿಶ್ ಕನ್ಯಾಡಿ, ರವಿ, ಕಂದಾಯ ಪರಿವೀಕ್ಷಕ ಸುಬ್ರಮಣಿ, ಗ್ರಾಮ ಲೆಕ್ಕಪರಿಶೋಧಕ ಮುನಿಸ್ವಾಮಿ, ಜ್ಞಾನವಿಕಾಸ ಸಮನ್ವಯಾಧಿಕಾರಿ ನೀಲಮ್ಮ, ವಲಯದ ಮೇಲ್ವಿಚಾರಕಿ ಮಮತ, ಸೇವಾಪ್ರತಿನಿಧಿ ನಂದಿನಿ ಹಾಗೂ ಗಜಲಕ್ಷ್ಮಿ ಜ್ಞಾನ ವಿಕಾಸ ಕೇಂದ್ರದ ಸದಸ್ಯರು ಈ ಸಂದರ್ಭದಲ್ಲಿ ಹಾಜರಿದ್ದರು.
- Advertisement -
- Advertisement -
- Advertisement -
- Advertisement -