Home News ಮಹಿಳೆಯರ ಪ್ರತಿಭೆಯನ್ನು ಪ್ರದರ್ಶಿಸಲು ಸೂಕ್ತ ಅವಕಾಶ ಸಿಗಬೇಕು

ಮಹಿಳೆಯರ ಪ್ರತಿಭೆಯನ್ನು ಪ್ರದರ್ಶಿಸಲು ಸೂಕ್ತ ಅವಕಾಶ ಸಿಗಬೇಕು

0

ಮಹಿಳೆಯರು ಕೌಟುಂಬಿಕ ನಿರ್ವಹಣೆಯ ಜವಾಬ್ದಾರಿಯಿಂದ ಸದಾ ಒತ್ತಡದಲ್ಲಿರುತ್ತಾರೆ. ಅವರಲ್ಲಿರುವ ಪ್ರತಿಭೆಯನ್ನು ಪ್ರದರ್ಶಿಸಲು ಸೂಕ್ತ ಅವಕಾಶ ಸಿಗಬೇಕು ಎಂದು ಜಿಲ್ಲಾ ಪಂಚಾಯಿತಿ ಸದಸ್ಯೆ ತನುಜಾ ರಘು ಹೇಳಿದರು.
ನಗರದ ನೆಹರು ಕ್ರೀಡಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಇಲಾಖೆ ಹಾಗು ಯುವ ಸಂಬಲೀಕರಣ ಇಲಾಖೆ ಚಿಕ್ಕಬಳ್ಳಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಗುರುವಾರ ಮಹಿಳೆಯರಿಗಾಗಿ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಕ್ರೀಡಾಕೂಟದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಶಿಡ್ಲಘಟ್ಟದ ನೆಹರು ಕ್ರೀಡಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಇಲಾಖೆ ಹಾಗು ಯುವ ಸಂಬಲೀಕರಣ ಇಲಾಖೆ ಚಿಕ್ಕಬಳ್ಳಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಗುರುವಾರ ಮಹಿಳೆಯರಿಗಾಗಿ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರೂ ಸೇರಿದಂತೆ ನಗರಸಭೆ ಸದಸ್ಯರು ಪಾಲ್ಗೊಂಡಿದ್ದರು.

ನಮ್ಮ ದೇಶದಲ್ಲಿ ಅನಾದಿ ಕಾಲದಿಂದಲೂ ಮಹಿಳೆಯರಿಗೆ ವಿಶೇಷ ಸ್ಥಾನ ಮಾನ ನೀಡಿದ್ದು ಮಹಿಳೆಯರನ್ನು ಅಧಿಪರಾಶಕ್ತಿ ಎಂದು ಕರೆಯುತ್ತಾರೆ, ತಾಳ್ಮೆಯಿಂದ ತನ್ನ ಕುಟುಂಬದ ಜವಾಬ್ದಾರಿಯನ್ನು ಹೊತ್ತು ಮಹಿಳೆ ದಿನನಿತ್ಯದ ಕಾರ್ಯಗಳ ಒತ್ತಡದಿಂದಾಗಿ ಹೊರ ಬಂದು ತಮ್ಮಲಿ ಆಡಗಿರುವ ಪ್ರತಿಭೆಯನ್ನು ಎಲ್ಲೂ ಬಿಂಬಿಸಲಾಗದು ಎಂದರು.
ಶ್ರಮ ಜೀವಿಯಂತೆ ದುಡಿಯುವ ಮಹಿಳೆಯರು ವಿರಾಮದ ವೇಳೆಯಲ್ಲಿ ವ್ಯಾಯಾಮ, ಯೋಗ ಹಾಗು ವಿವಿಧ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ತಮ್ಮಲ್ಲಿ ಆಡಗಿರುವ ಪ್ರತಿಭೆಯನ್ನು ಗುರುತಿಸಿಕೊಳ್ಳಬೇಕು. ನಗರದ ನೆಹರು ಕ್ರೀಡಾಂಗಣ ಮೂಲಭೂತ ಸೌಕರ್ಯಿಗಳಿಂದ ವಂಚಿತವಾಗಿದ್ದು, ನೀರಿನ ಸಮಸ್ಯೆ ಹಾಗೂ ಮಹಿಳೆಯರಿಗೆ ಶೌಚಾಲಯದ ವ್ಯವಸ್ಥೆ ಇಲ್ಲದೆ ಪರದಾಡುವಂತಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗುವುದೆಂದರು.
ಈ ಸಂದರ್ಭದಲ್ಲಿ ಸಿಡಿಪಿಓ ಲಕ್ಷ್ಮೀದೇವಮ್ಮ, ತಾಲ್ಲೂಕು ಪಂಚಾಯಿತಿ ಸದಸ್ಯೆ ಪಂಕಜ ನಿರಂಜನ್, ನಗರಸಭೆ ಉಪಾಧ್ಯಕ್ಷೆ ಪ್ರಭಾವತಿ ಸುರೇಶ್, ಡಾ, ವಿಜಯ, ಗಿರಿಜಾಬಿಂಕ, ಸಿಡಿಪಿಓ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು ಹಾಜರಿದ್ದರು.