ತಾಲ್ಲೂಕಿನ ಜೆ.ವೆಂಕಟಾಪುರ ಗ್ರಾಮದಲ್ಲಿ ಮಹಿಳೆಯ ಮೇಲೆ ಬುಧವಾರ ಹಲ್ಲೆ ನಡೆದಿದ್ದು, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜೆ.ವೆಂಕಟಾಪುರ ಗ್ರಾಮದಲ್ಲಿ ಸುಮಾರು 25 ವರ್ಷಗಳಿಂದ ವಾಸವಾಗಿರುವ ಗಿರಿಜಮ್ಮ(49) ಅವರ ಪಕ್ಕದ ಮನೆಯ ದಂಪತಿಗಳು ಹಲ್ಲೆ ನಡೆಸಿರುವುದಾಗಿ ದೂರು ನೀಡಿದ್ದಾರೆ. ಅಕ್ಕಪಕ್ಕದ ಮನೆಯವರ ಕಿರುಕುಳದಿಂದ ಸ್ವಂತ ಮನೆಯನ್ನು ಬಾಡಿಗೆಗೆ ನೀಡಿ ಅದೇ ಗ್ರಾಮದಲ್ಲಿ ಬೇರೆಡೆ ವಾಸಿಸುತ್ತಿದ್ದರು. ಬುಧವಾರ ಸಂಜೆ ಬಾಡಿಗೆ ವಸೂಲಿಗೆಂದು ಹೋದಾಗ ಅವರ ಮೇಲೆ ಹಲ್ಲೆ ನಡೆದಿರುವುದಾಗಿ ತಿಳಿಸಿದ್ದಾರೆ. ಗಿರಿಜಮ್ಮ ಅವರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗೆ ಮಾನವ ಹಕ್ಕುಗಳ ರಕ್ಷಣಾ ಸಮಿತಿಯ ಮಹಿಳಾ ಘಟಕದ ರಾಜ್ಯ ಅಧ್ಯಕ್ಷೆ ಎನ್.ಪಿ. ಶೋಭಾರಾಣಿ ಭೇಟಿ ನೀಡಿದ್ದರು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -







