ರೈತರು ಹಾಗೂ ಈ ನಾಡಿನ ಜನ ಸಾಮನ್ಯರ ಬಗ್ಗೆ ಅಪಾರ ಕಾಳಜಿಯುಳ್ಳ ಮಾಜಿ ಸಿ.ಎಂ.ಕುಮಾರಸ್ವಾಮಿಯು ಮುಂದಿನ ಸಿಎಂ ಆಗುವುದರಲ್ಲಿ ಅನುಮಾನವೇ ಇಲ್ಲ ಎಂದು ಶಾಸಕ ಎಂ.ರಾಜಣ್ಣ ಅಭಿಪ್ರಾಯಪಟ್ಟರು.
ಜೆಡಿಎಸ್ನ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ೫೯ನೇ ವರ್ಷದ ಹುಟ್ಟು ಹಬ್ಬವನ್ನು ಶನಿವಾರ ಜೆಡಿಎಸ್ ಕಾರ್ಯಕರ್ತರು ಆಚರಿಸಿದರು.
ಶಾಸಕ ಎಂ.ರಾಜಣ್ಣ, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಡಾ.ಧನಂಜಯರೆಡ್ಡಿ ನೇತೃತ್ವದಲ್ಲಿ ಹಲವಾರು ಜೆಡಿಎಸ್ನ ಕಾರ್ಯಕರ್ತರು ಶಿಡ್ಲಘಟ್ಟ ನಗರದ ಕೋಟೆ ಆಂಜನೇಯಸ್ವಾಮಿ, ದಿಬ್ಬೂರಹಳ್ಳಿ ಮಾರ್ಗದ ಅಮೀರ್ ಬಾಬಾ ದರ್ಗಾ ಹಾಗೂ ಚರ್ಚ್ನಲ್ಲಿ ಪ್ರಾರ್ಥನೆ ಸಲ್ಲಿಸಿದರು.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಹೆಚ್ಚು ಸ್ಥಾನಗಳಲ್ಲಿ ಗೆದ್ದು ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿ ಆಗಲಿ ಎಂದು ಪ್ರಾರ್ಥಿಸಿದರು.
ನಂತರ ಸಾರ್ವಜನಿಕ ಆಸ್ಪತ್ರೆಯಲ್ಲಿನ ಹೊರ ಹಾಗೂ ಒಳರೋಗಿಗಳು, ಆಶಾ ಕಿರಣ ಅಂಧ ಮಕ್ಕಳ ಶಾಲೆಯ ಮಕ್ಕಳಿಗೆ ಹಣ್ಣು ಹಂಪಲು ಬ್ರೆಡ್ ವಿತರಿಸಲಾಯಿತು.
ಶಾಸಕ ಎಂ.ರಾಜಣ್ಣ, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಡಾ.ಧನಂಜಯರೆಡ್ಡಿ, ನಗರಸಭೆ ಸದಸ್ಯ ಅಪ್ಸರ್ಪಾಷ, ಮುಖಂಡರಾದ ಎಸ್.ರಹಮತ್ತುಲ್ಲ, ಮಳ್ಳೂರಯ್ಯ, ರಮೇಶ್ ಹಾಜರಿದ್ದರು.
- Advertisement -
- Advertisement -
- Advertisement -
- Advertisement -