ಮಾನವ ಹಕ್ಕುಗಳ ಜಾಗೃತಿ ಸಮಿತಿಯ ತಾಲ್ಲೂಕು ಅಧ್ಯಕ್ಷರಾಗಿ ಎಂ.ನಾಗರಾಜ್ ನೇಮಕವಾಗಿದ್ದಾರೆ ಎಂದು ಸಂಸ್ಥಾಪಕ ಅಧ್ಯಕ್ಷ ಸಮೇತನಹಳ್ಳಿ ಲಕ್ಷ್ಮಣ್ಸಿಂಗ್ ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಮಾನವ ಹಕ್ಕುಗಳ ಜಾಗೃತಿ ಸಮಿಯು, ಎಲ್ಲಾ ವರ್ಗದ ಜನತೆಗೆ ನ್ಯಾಯವನ್ನು ಒದಗಿಸಿಕೊಡುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದೆ. ಜನರ ಹಕ್ಕುಗಳಿಗೆ ಧಕ್ಕೆಯಾಗುವಂತಹ ಸಂದರ್ಭದಲ್ಲಿ ನಿರಂತರವಾಗಿ ಹೋರಾಟದ ಮುಖಾಂತರ ನ್ಯಾಯವನ್ನು ಒದಗಿಸುವಂತಹ ಕೆಲಸವನ್ನು ಮಾಡಲಾಗುತ್ತಿದೆ. ತಾಲ್ಲೂಕಿನಲ್ಲಿಯೂ ಕೂಡಾ ದೀನ ದಲಿತರ ಏಳಿಗೆ, ಹಾಗೂ ಸಮಾಜದಲ್ಲಿ ತುಳಿತಕ್ಕೆ ಒಳಗಾಗಿರುವವರು ಹಾಗೂ ತಮ್ಮ ಹಕ್ಕುಗಳಿಂದ ವಂಚಿತರಾಗಿರುವಂತಹ ಜನತೆಗೆ ನ್ಯಾಯವನ್ನು ಒದಗಿಸಿಕೊಡುವಂತಹ ಪ್ರಾಮಾಣಿಕವಾದ ಹೋರಾಟಗಳನ್ನು ಮಾಡಲಾಗುತ್ತದೆ. ಈ ನಿಟ್ಟಿನಲ್ಲಿ ಪದಾಧಿಕಾರಿಗಳೂ ಕೂಡಾ ಉತ್ತಮವಾದ ಸೇವೆ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.
- Advertisement -
- Advertisement -
- Advertisement -
- Advertisement -