Home News ಮಾನವ ಹಕ್ಕುಗಳ ಸಂಸ್ಥೆ ವತಿಯಿಂದ ದೂರು ಸ್ವೀಕಾರ

ಮಾನವ ಹಕ್ಕುಗಳ ಸಂಸ್ಥೆ ವತಿಯಿಂದ ದೂರು ಸ್ವೀಕಾರ

0

ನಗರದ ಅಶೋಕ ರಸ್ತೆಯ ವೇಣುಗೋಪಾಲಸ್ವಾಮಿ ದೇವಾಲಯದ ಆವರಣದಲ್ಲಿ ಸೋಮವಾರ ಭಾರತೀಯ ಮಾನವ ಹಕ್ಕುಗಳ ಸಂಸ್ಥೆ ವತಿಯಿಂದ ಸಾರ್ವಜನಿಕರಿಂದ ಕುಂದುಕೊರತೆಗಳ ದೂರುಗಳನ್ನು ಸ್ವೀಕರಿಸಲಾಯಿತು.
ಗ್ರಾಮ ಪಂಚಾಯಿತಿ ಪಿಡಿಒ ಗಳು ಕುಂದುಕೊರತೆಗಳ ಅರ್ಜಿಯನ್ನು ಕೊಟ್ಟರೆ ಸಭೆಯಲ್ಲಿ ಪ್ರಸ್ತಾಪಿಸುವುದಿಲ್ಲ. ತಾಲ್ಲೂಕು ಕಚೇರಿಗಳಲ್ಲಿ ಸಕಾಲ ಅರ್ಜಿಗೆ ಸ್ಪಂದಿಸುತ್ತಿಲ್ಲ, ಮುಂತಾದ ದೂರುಗಳನ್ನು ಅರ್ಜಿದಾರರು ಸಲ್ಲಿಸಿದರು.
ಭಾರತೀಯ ಮಾನವ ಹಕ್ಕುಗಳ ಸಂಸ್ಥೆ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಎಂ.ಬೈರೇಗೌಡ ಮಾತನಾಡಿ, “ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ತಾಲ್ಲೂಕು ಕಚೇರಿಗೆ ಸಂಬಂಧಿಸಿದಂತೆ ದೂರುಗಳು ಬಂದಿವೆ. ಈಗಾಗಲೇ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿಗಳಿಗೆ ವಿಷಯ ತಿಳಿಸಿದ್ದು, ಲಿಖಿತ ಮನವಿಯನ್ನು ಸಹ ನೀಡಲಿದ್ದೇವೆ” ಎಂದು ತಿಳಿಸಿದರು.
ಭಾರತೀಯ ಮಾನವ ಹಕ್ಕುಗಳ ಸಂಸ್ಥೆ ಜಿಲ್ಲಾ ಘಟಕದ ಜಿಲ್ಲಾ ಉಸ್ತುವಾರಿ ಡಿ.ಅನಿಲಾ, ಉಪಾಧ್ಯಕ್ಷರಾದ ಸಣ್ಣಮ್ಮ, ನಿಜಾಮುದ್ದೀನ್, ಛಾಯಾಂಕ್ ಹಾಜರಿದ್ದರು.

error: Content is protected !!
Exit mobile version