ಹಕ್ಕು ಚಲಾಯಿಸುವ ಪ್ರತಿಯೊಬ್ಬ ಗ್ರಾಹಕನೂ ತಾನು ಖರೀದಿ ಮಾಡುವ ವಸ್ತುವಿನ ಗುಣಮಟ್ಟ, ಬೆಲೆ, ಮಾಹಿತಿ ಅರಿತು ತನ್ನ ಜವಾಬ್ದಾರಿ ನಿಭಾಯಿಸಬೇಕು ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಎನ್.ಎ.ಶ್ರೀಕಂಠ ತಿಳಿಸಿದರು.
ನಗರದ ದಿಬ್ಬೂರಹಳ್ಳಿ ರಸ್ತೆಯಲ್ಲಿರುವ ನ್ಯಾಯಾಲಯದ ಆವರಣದಲ್ಲಿ ಗುರುವಾರ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಪೊಲೀಸ್ ಇಲಾಖೆ ಹಾಗೂ ಕಂದಾಯ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಗ್ರಾಹಕರ ಹಕ್ಕುಗಳ ದಿನಾಚರಣೆ ಅಂಗವಾಗಿ ನಡೆದ ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬಹಳಷ್ಟು ಕಡೆ ಅರಿವು, ಮಾಹಿತಿಯ ಕೊರತೆಯಿಂದಾಗಿ ಗ್ರಾಹಕರು ಮೋಸ ಹೋಗುತ್ತಿದ್ದಾರೆ. ಗ್ರಾಹಕನನ್ನು ಜಾಗೃತಗೊಳಿಸಿದಾಗ ಇಂಥ ಮೋಸ ಪ್ರವೃತ್ತಿಗೆ ತಡೆಯೊಡ್ಡಬಹುದು. ಎಚ್ಚೆತ್ತ ಗ್ರಾಹಕ ನಮ್ಮ ದೇಶದ ಆಸ್ತಿ ಇದ್ದಂತೆ ಎಂಬುದನ್ನು ಮರೆಯಬಾರದು ಎಂದರು.
ಗ್ರಾಹಕರು ಖರೀದಿಸಿದ ವಸ್ತು ಹಾಗೂ ಪಡೆದ ಸೇವೆಯಲ್ಲಿ ಲೋಪವಿದ್ದಲ್ಲಿ ಅಂಥ ಕಂಪೆನಿಗಳ ವಿರುದ್ಧ ಗ್ರಾಹಕರು ಗ್ರಾಹಕ ವ್ಯಾಜ್ಯಗಳ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿ ಪರಿಹಾರ ಪಡೆಯಬಹುದು. ಖರೀದಿಸಿದ ಬಿಲ್ ಕಡ್ಡಾಯವಾಗಿ ಹೊಂದಿರಬೇಕು ಎಂದರು.
ಸಿವಿಲ್ ನ್ಯಾಯಾಧೀಶರಾದ ಟಿ.ಎಲ್.ಸಂದೀಶ್, ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಟಿ.ವಿ.ಚಂದ್ರಶೇಖರ ಗೌಡ, ವಕೀಲ ಮಂಜುನಾಥ್