ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಸೋಮವಾರ ಭಾರತೀಯ ರೆಡ್ಕ್ರಾಸ್ ಸೊಸೈಟಿ, ಹಾಗೂ ಯೂನಿಟಿ ಸಿಲ್ಸಿಲಾ ಕಮಿಟಿಯಿಂದ ಮಹಮದ್ ಪೈಗಂಭರ್ ಅವರ ಜನ್ಮದಿನದ ಅಂಗವಾಗಿ ಆಯೋಜನೆ ಮಾಡಲಾಗಿದ್ದ ಉಚಿತ ರಕ್ತದಾನ ಶಿಬಿರವನ್ನು ತಹಶೀಲ್ದಾರ್ ಜಿ.ಎ.ನಾರಾಯಣಸ್ವಾಮಿ ಉದ್ಘಾಟನೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ತಹಶೀಲ್ದಾರ್ ಜಿ.ಎ.ನಾರಾಯಣಸ್ವಾಮಿ,‘ಪಟ್ಟಣದಲ್ಲಿ ಮೊದಲ ಬಾರಿಗೆ ಮುಸ್ಲಿಂ ಜನಾಂಗದ ಯುವಕರು ರಕ್ತದಾನಕ್ಕೆ ಮುಂದಾಗಿರುವುದು ಶ್ಲಾಘನೀಯ. ನಾಗರೀಕರು ೫೦೦ ರೂಪಾಯಿಗಳನ್ನು ಸಂದಾಯ ಮಾಡಿ ರೆಡ್ಕ್ರಾಸ್ ಸೊಸೈಟಿಯ ಅಜೀವ ಸದಸ್ಯತ್ವವನ್ನು ಪಡೆದು ಸಮಾಜಸೇವೆಯಲ್ಲಿ ತೊಡಗಿಸಿಕೊಳ್ಳಬೇಕು. ಪ್ರತಿವರ್ಷವೂ ಈದ್-ಮೀಲಾದ್ ಹಬ್ಬದ ಸಂದರ್ಭದಲ್ಲಿ ಸ್ವಯಂ ರಕ್ತದಾನ ಮಾಡುವ ಮೂಲಕ ಸಮಾಜಕ್ಕೆ ನೆರವಾಗಬೇಕು’ ಎಂದು ಯುವಕರಿಗೆ ಕರೆ ನೀಡಿದರು.
ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಗಣಪತಿ ಸಾಕರೆ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಗುರುರಾಜ್, ಕಾರ್ಯದರ್ಶಿ ಅಕ್ಕಲರೆಡ್ಡಿ, ಮಹಮದ್ಖಾಸಿಂ, ಮುನಿಕೃಷ್ಣ, ಮಹಮದ್ಅಸದ್, ಸಮೀರ್, ಅಕ್ರಮ್ಪಾಷಾ, ಷಂಷದ್, ರೆಹಮತ್, ತೌಫಿರ್, ಅಮೀರ್, ಅನ್ಸರ್, ಸೈಯದ್ಮುಸೀರ್, ಇಂತಿಯಾಜ್ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.
- Advertisement -
- Advertisement -
- Advertisement -
- Advertisement -