22.1 C
Sidlaghatta
Tuesday, May 21, 2024

ಮುಸ್ಲಿಂ ಸಮಾಜದವರ ಪ್ರತಿಭಟನೆ

- Advertisement -
- Advertisement -

ಪ್ರವಾದಿ ಮಹಮದ್‍ಪೈಗಂಬರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಅಖಿಲ ಭಾರತ ಹಿಂದೂ ಮಹಾಸಭಾದ ಅಧ್ಯಕ್ಷ ಕಮಲೇಶ್ ಅವರ ಮೇಲೆ ಕಾನೂನು ಪ್ರಕಾರ ಶಿಕ್ಷೆಗೆ ಒಳಪಡಿಸಬೇಕು ಎಂದು ನೂರಾರು ಮಂದಿ ಮುಸ್ಲಿಂ ಜನರು ಪ್ರತಿಭಟನೆ ನಡೆಸಿದರು.
ನಗರದ ಬಿಲಾಲ್ ಮಸೀದಿಯಲ್ಲಿ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಜಮಾವಣೆಗೊಂಡ ಮುಸ್ಲಿಂ ಬಾಂಧವರು ಅಖಿಲ ಭಾರತ ಹಿಂದೂ ಮಹಾಸಭಾದ ಅಧ್ಯಕ್ಷ ಕಮಲೇಶ್ ತಿವಾರಿಯ ವಿರುಧ್ಧ ಘೋಷಣೆಗಳನ್ನು ಕೂಗಿದರಲ್ಲದೇ ತಿವಾರಿಯ ಅಣಕು ಶವಕ್ಕೆ ಬೆಂಕಿ ಇಟ್ಟು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಪ್ರವಾದಿ ಮೊಹ್ಮದ್ ಪೈಗಂಬರ್ ಅವರನ್ನು ಅವಹೇಳನ ಮಾಡುವ ಮೂಲಕ ಹಿಂದೂ ಮಹಾಸಭಾದ ಮುಖಂಡ ಇಡೀ ಜಗತ್ತಿನಲ್ಲಿರುವ ಮುಸ್ಲಿಂರ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ್ದು ಸಮಾಜದಲ್ಲಿ ಜಾತಿ ಮತಗಳ ಹೆಸರಿಲ್ಲಿ ವೈಮನಸ್ಸು ಬೆಳೆಯಲು ಪ್ರಚೋದನಾಕಾರಿ ಹೇಳಿಕೆ ನೀಡುತ್ತಿದ್ದು ಹೇಳಿಕೆಯನ್ನು ಕೇಂದ್ರ ಸರಕಾರ ಗಂಭೀರವಾಗಿ ಪರಿಗಣಿಸಿ ಕಠಿಣ ಕ್ರಮ ಜರುಗಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ರೀತಿಯ ಹೋರಾಟ ನಡೆಸಲಾಗುವುದೆಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.
ಗಂಗಾ ಜಮುನಾ ಸಂಸ್ಕøತಿಯನ್ನು ಹೊಂದಿರುವ ದೇಶದಲ್ಲಿ ಜಾತಿ ಮತಭೇದ ಮರೆತು ಸೌರ್ಹಾದತೆಯಿಂದ ಜೀವನ ನಡೆಸುತ್ತಿದ್ದು ಇದನ್ನು ಸಹಿಸದ ಕೋಮುವಾದಿ ಶಕ್ತಿಗಳು ಜಾತಿ-ಜಾತಿಗಳ ಮಧ್ಯೆ ವಿಷಬೀಜ ಬಿತ್ತನೆ ಮಾಡುವ ಕೆಲಸ ಮಾಡುತ್ತಿದ್ದಾರೆ, ಇದೀಗ ಧರ್ಮಗುರುಗಳ ಕುರಿತು ಅವಹೇಳನಕಾರಿ ಹೇಳಿಕೆ ನೀಡುವ ಮೂಲಕ ಸಮಾಜದ ಸ್ವಾಸ್ಥವನ್ನು ಹಾಳು ಮಾಡಲು ಹುನ್ನಾರ ನಡೆಸಿರುವವರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದರು.
ಬಿಲಾಲ್ ಮಸೀದಿಯ ಯುವಜನ ಸಮಿತಿಯ ಪದಾಧಿಕಾರಿಗಳು ಸೇರಿದಂತೆ ನಗರದ ಬಹುತೇಕ ಮುಸ್ಲಿಂರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
error: Content is protected !!