ನಗರದ ನಗರಸಭೆ ಕಾರ್ಯಾಲಯದ ಮುಂಭಾಗದಲ್ಲಿ ಸಿಐಟಿಯು ನೇತೃತ್ವದಲ್ಲಿ ಜಲಗಾರರು ಮಾಡುತ್ತಿರುವ ಅನಿರ್ಧಿಷ್ಟ ಧರಣಿಯು ಮೂರನೇ ದಿನವಾದ ಭಾನುವಾರವೂ ಮುಂದುವರೆದಿದೆ.
ಗ್ರಾಮ ಪಂಚಾಯಿತಿ ನೌಕರರ ಸಂಘ ಹಾಗೂ ಬಿಸಿಯೂಟ ನೌಕರರ ಸಂಘದ ಬೆಂಬಲದೊಂದಿಗೆ ನಗರಸಭೆಯಲ್ಲಿ ಗುತ್ತಿಗೆ ಆಧಾರದದಲ್ಲಿ ಕಾರ್ಯ ನಿರ್ವಹಿಸುವ ಜಲಗಾರರು ತಮ್ಮ ಹದಿನೈದು ತಿಂಗಳ ವೇತನ ಸೇರಿದಂತೆ ಸಮಾನ ಕೆಲಸ ಸಮಾನ ವೇತನಕ್ಕಾಗಿ ಆಗ್ರಹಿಸಿ ಶುಕ್ರವಾರ ಆರಂಭಿಸಿದ ತಮ್ಮ ಹೋರಾಟವನ್ನು ಭಾನುವಾರವೂ ಮುಂದುವರೆಸಿದ್ದಾರೆ.
ನಗರಸಭೆ ಅಧ್ಯಕ್ಷ ಅಫ್ಸರ್ಪಾಷ ಹಾಗೂ ಪೌರಾಯುಕ್ತ ಜಿ.ಎನ್.ಚಲಪತಿ ಶನಿವಾರ ಸಂಜೆ ಪ್ರತಿಭಟನಾಕಾರರ ಮುಖಂಡರ ಜೊತೆ ಮಾತುಕತೆ ನಡೆಸಿ ಹೋರಾಟ ಹಿಂಪಡೆಯುಂತೆ ಮನವೊಲಿಸಲು ಯತ್ನಿಸಿದರಾದರೂ ಮಾತುಕತೆ ವಿಫಲವಾದ ಹಿನ್ನಲೆಯಲ್ಲಿ ಹೋರಾಟವನ್ನು ಭಾನವಾರವೂ ಮುಂದುವರೆಸಿದ್ದಾರೆ.
ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ಭಾನುವಾರ ಸಿಐಟಿಯು ಜಿಲ್ಲಾ ಘಟಕದ ಪದಾಧಿಕಾರಿಗಳು ಸೇರಿದಂತೆ ಕಾರ್ಮಿಕ ಸಂಘಟನೆ ಹಾಗೂ ಟಿಪ್ಪು ಸಂಘಟನೆಯ ಮುಖಂಡರು ಧರಣಿಯಲ್ಲಿ ಪಾಲ್ಗೊಂಡಿದ್ದರು.
ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದಗಂಗಪ್ಪ, ತಾಲ್ಲೂಕು ಅಧ್ಯಕ್ಷ ಸುದರ್ಶನ್, ಗ್ರಾಮ ಪಂಚಾಯಿತಿ ನೌಕರರ ಸಂಘದ ಗೌರವಾಧ್ಯಕ್ಷೆ ಮಧುಲತಾ, ಬಿಸಿಯೂಟ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷೆ ಮುನಿಲಕ್ಷ್ಮಮ್ಮ, ಕಾರ್ಮಿಕ ಸಮಘಟನೆಯ ಪ್ರದೀಪ್, ಟಿಪ್ಪು ಸಂಘಟನೆಯ ಮೌಲಾ, ಜಲಗಾರರಾದ ನಾಗರಾಜ, ಟಿ.ಎನ್.ರವಿ, ರಮೇಶ್, ರಾಜೇಶ್, ಆನಂದ್, ಮಂಜುನಾಥ್, ಮುರಳಿ, ಬಾಬು, ನವಾಜ್ ಪಾಷಾ, ನವೀನ್ಕುಮಾರ್, ಕೆ.ಶ್ರೀನಿವಾಸ್, ನರಸಿಂಹಪ್ಪ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
- Advertisement -
- Advertisement -
- Advertisement -







