ತಾಲ್ಲೂಕಿನ ಮೇಲೂರು ಗ್ರಾಮದಲ್ಲಿ ಡಾ.ರಾಜ್ಕುಮಾರ್ ಅವರ 85ನೇ ಹುಟ್ಟುಹಬ್ಬದ ಪ್ರಯುಕ್ತ ಗುರುವಾರ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು.
ಡಾ.ರಾಜ್ಕುಮಾರ್ ಅಭಿಮಾನಿಗಳ ಸಂಘ, ಕನ್ನಡ ರೈತ ಯುವಕ ಸಂಘ ಹಾಗೂ ರೆಡ್ಕ್ರಾಸ್ ಸಂಸ್ಥೆಯ ಸಹಯೋಗದೊಂದಿಗೆ ಮೇಲೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ನಡೆಸಿದ ರಕ್ತದಾನ ಶಿಬಿರವನ್ನು ತಹಶೀಲ್ದಾರ್ ಜಿ.ಎ.ನಾರಾಯಣಸ್ವಾಮಿ ಉದ್ಘಾಟಿಸಿದರು.
‘ಕಳೆದ ಸಾಲಿನಲ್ಲಿ ಜಿಲ್ಲೆಯಲ್ಲೇ ಹೆಚ್ಚು ರಕ್ತದಾನ ಮಾಡಿದ ದಾಖಲೆ ಮತ್ತು ಕೀರ್ತಿ ಶಿಡ್ಲಘಟ್ಟ ತಾಲ್ಲೂಕಿಗೆ ಲಭಿಸಿದೆ. ರಕ್ತದಾನದ ಬಗ್ಗೆ ಅರಿವು ಗ್ರಾಮಾಂತರ ಪ್ರದೇಶಗಳಲ್ಲೂ ಹರಡಿ ವ್ಯಾಪಕವಾಗಬೇಕು. ಜಿಲ್ಲಾ ಕೇಂದ್ರದಲ್ಲಿ ರಕ್ತನಿಧಿ ಬ್ಯಾಂಕ್ ಸ್ಥಾಪಿಸಿರುವುದರಿಂದ ಸಂಗ್ರಹಿಸಿದ ರಕ್ತ ಅವಶ್ಯಕತೆಯಿರುವವರಿಗೆ ಲಭ್ಯವಾಗುತ್ತದೆ. ಡಾ.ರಾಜ್ಕುಮಾರ್ ಮಾದರಿ ವ್ಯಕ್ತಿತ್ವವುಳ್ಳವರು. ಅವರು ಎಲ್ಲರಿಗೂ ಪ್ರೇರಕರಾಗಿದ್ದವರು. ಅವರ ಸವಿನೆನಪಿನಲ್ಲಿ ರಕ್ತದಾನ ಶಿಬಿರವನ್ನು ಕಳೆದ ಹದಿನೈದು ವರ್ಷಗಳಿಂದ ಆಯೋಜಿಸುತ್ತಿರುವುದು ಗ್ರಾಮಸ್ಥರ ಸಾಮಾಜಿಕ ಕಾಳಜಿಯನ್ನು ಪ್ರತಿನಿಧಿಸುತ್ತದೆ’ ಎಂದು ತಹಶೀಲ್ದಾರ್ ಜಿ.ಎ.ನಾರಾಯಣಸ್ವಾಮಿ ಹೇಳಿದರು. ಒಟ್ಟು 70 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.
ರೆಡ್ಕ್ರಾಸ್ ಸಂಸ್ಥೆಯ ಜಿಲ್ಲಾ ಕಾರ್ಯದರ್ಶಿ ನಾರಾಯಣಾಚಾರ್, ತಾಲ್ಲೂಕು ಕಾರ್ಯದರ್ಶಿ ಗುರುರಾಜರಾವ್, ಡಾ.ಉಷಾರಾಣಿ, ಪಶುವೈದ್ಯಾಧಿಕಾರಿ ಡಾ.ಜಯಶೀಲರೆಡ್ಡಿ, ಶ್ರೀನಿವಾಸಮೂರ್ತಿ, ರಾಮಾಂಜಿನಪ್ಪ, ಡಾ.ರಾಜ್ಕುಮಾರ್ ಅಭಿಮಾನಿಗಳ ಸಂಘದ ಧರ್ಮೇಂದ್ರ, ಸುಧೀರ್, ಸುದರ್ಶನ್, ಆನಂದ್, ಶ್ರೀನಿವಾಸ್, ಗೋಪಾಲ್, ಲಕ್ಷ್ಮಣ್, ಗ್ರಾಮಪಂಚಾಯಿತಿ ಸದಸ್ಯರಾದ ಕೆ.ಮಂಜುನಾಥ್, ರೂಪೇಶ್, ಮುನಿಕೃಷ್ಣಪ್ಪ, ರೇಣುಕಾ ಆನಂದ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -