ಇತ್ತೀಚೆಗೆ ಮದ್ಯಪ್ರದೇಶದಲ್ಲಿ ರೈತರ ಮೇಲೆ ಗೋಲಿಬಾರ್ ನಡೆಸಿದ ಬಿಜೆಪಿ ಸರ್ಕಾರದ ಕ್ರಮವನ್ನು ಖಂಡಿಸಿ ಯುವ ಕಾಂಗ್ರೆಸ್ ಸಮಿತಿ ಕಾರ್ಯಕರ್ತರು ನಗರದಲ್ಲಿ ಶನಿವಾರ ರೈಲ್ವೆ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿದರು.
ರೈತರ ಮೇಲೆ ಗೋಲಿಬಾರ್ ನಡೆಸಿದ ಮದ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ನೇತೃತ್ವದ ಬಿಜೆಪಿ ಸರ್ಕಾರದ ಕ್ರಮವನ್ನು ಖಂಡಿಸಿ ರೈಲು ನಿಲ್ದಾಣದವರೆಗೆ ತೆರಳಿದ ಯುವ ಕಾಂಗ್ರೆಸ್ ಸಮಿತಿ ಕಾರ್ಯಕರ್ತರು ರೈಲು ನಿಲ್ದಾಣದಲ್ಲಿ ರೈಲು ತಡೆದು ಪ್ರತಿಭಟನೆ ನಡೆಸಲು ಪ್ರಯತ್ನಿಸಿದರು. ಆದರೆ ಪೊಲೀಸರು ತಡೆ ಕಾರಣ ರೈಲ್ವೆ ಗೇಟ್ ಬಳಿ ಘೋಷಣೆಗಳನ್ನು ಕೂಗಿದರು.
ಈ ಸಂದರ್ಭದಲ್ಲಿ ಮಾತನಾಡಿದ ತಾಲ್ಲೂಕು ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಂಜುನಾಥ್, ರೈತರ ಮೇಲಿನ ಗೋಲಿಬಾರ್ ಘಟನೆ ಖಂಡಿಸಿ, ಯುವ ಕಾಂಗ್ರೆಸ್ ರಾಜ್ಯ ಸಮಿತಿ ಇಂದು ರಾಜ್ಯಾದ್ಯಂತ ಪ್ರತಿಭಟನೆ ಕರೆ ನೀಡಿದ ಹಿನ್ನಲೆಯಲ್ಲಿ ನಗರದಲ್ಲಿಂದು ರೈಲು ತಡೆಯಲು ಪ್ರಯತ್ನಿಸಲಾಯಿತು. ಅದೇ ರೀತಿ ರೈತ ವಿರೋಧಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಯುವ ಕಾಂಗ್ರೆಸ್ ನಿರಂತರ ಹೋರಾಟ ಮಾಡಲಿದೆ ಎಂದರು.
ಪ್ರತಿಭಟನೆಯಲ್ಲಿ ತಾಲ್ಲೂಕು ಯುವ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಹರೀಶ್, ಸುಧಾಕರ್, ಸಾಧಿಕ್ಪಾಷಮ ಪ್ರಕಾಶ್, ಮಧು, ಮುಜಾಮಿಲ್, ಹರೀಶ್, ಮುಸ್ತು, ಕೃಷ್ಣಮೂರ್ತಿ ಹಾಜರಿದ್ದರು.
- Advertisement -
- Advertisement -
- Advertisement -
- Advertisement -