ಯೋಗವು ಭಾರತದ ಕೊಡುಗೆ

- Advertisement -
- Advertisement -

ಪ್ರತಿ ವ್ಯಕ್ತಿಯ ದೈಹಿಕ, ಮಾನಸಿಕ, ಭಾವನಾತ್ಮಕ, ಆಧ್ಯಾತ್ಮಿಕ ಉನ್ನತಿಗೆ ಯೋಗ ಸಹಕಾರಿಯಾಗಿದೆ ಎಂದು ಶಾಸಕ ಎಂ.ರಾಜಣ್ಣ ತಿಳಿಸಿದರು.
ನಗರದ ಕೋಟೆ ವೃತ್ತದಲ್ಲಿ ಬುಧವಾರ ಮುಂಜಾನೆ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಆಯೋಜಿಸಿದ್ದ ಮೂರನೇ ವಿಶ್ವ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಕ್ರಿ.ಪೂ 3ನೇ ಶತಮಾನದಲ್ಲಿದ್ದ ಪತಂಜಲಿ ಋಷಿಯ ಚಿಂತನೆಯ ಫಲವಾದ ಯೋಗ ಬರೀ ಶಾಸ್ತ್ರವಾಗದೆ, ಆಚರಣೆ, ಅಭ್ಯಾಸವಾಗಿ ಇಲ್ಲಿ ತನಕ ಬೆಳೆದು ಬಂದಿದೆ. ಯೋಗವು ಭಾರತದ ಕೊಡುಗೆ ಎಂದು ಹೆಮ್ಮೆಯಿಂದ ಹೇಳಿಕೊಳ್ಳಬಹುದು. ಒತ್ತಡದ ಬದುಕಿನಿಂದ ಮತ್ತು ಆಧುನಿಕ ಆಹಾರ ಪದ್ಧತಿಯಿಂದಾಗಿ ನಾನಾ ಖಾಯಿಲೆಗಳಿಂದ ಜನರು ಬಳಲುತ್ತಿದ್ದು, ಇದಕ್ಕೆ ಯೋಗ ಪರಿಹಾರವಾಗಲಿದೆ ಎಂದು ಹೇಳಿದರು.

ಯೋಗಬಂಧುಗಳಿಂದ ಸಾಮೂಹಿಯ ಯೋಗ ಪ್ರದರ್ಶನ

ಪತಂಜಲಿ ಯೋಗ ಶಿಕ್ಷಣ ಸಮಿತಿಯ ಅಧ್ಯಕ್ಷ ಶಂಕರ್ ಮಾತನಾಡಿ, ಜೂ.21 ದೀರ್ಘಕಾಲ ಹಗಲು ಹೊಂದಿರುವ ದಿನ. ಆದಿ ಕಾಲದಲ್ಲಿ ಸೂರ್ಯಾಭಿಮುಖವಾಗಿ ದೃಷ್ಟಿ ನೆಟ್ಟು ಧೀ ಶಕ್ತಿ ಉದ್ದೀಪನಗೊಳಿಸುತ್ತಿದ್ದ ದಿನ ಇದಾಗಿದೆ ಎಂದು ನಂಬಲಾಗಿದೆ. ಹೀಗೆ ಪಡೆದ ಯೋಗಶಕ್ತಿಯನ್ನು ಭಾರತದ ಋಷಿಗಳು ವಿಶ್ವದೆಲ್ಲೆಡೆ ಹರಡಿದರು. ಹೀಗಾಗಿ, ಇದೇ ದಿನ ಸೂಕ್ತ ಎಂದು ಆಯ್ಕೆ ಮಾಡಲಾಗಿದೆ. ವಿಶ್ವದ ನೂರಾರು ರಾಷ್ಟ್ರಗಳಲ್ಲಿ ಇಂದು ‘ವಿಶ್ವ ಯೋಗ ದಿನಾಚರಣೆ’ ನಡೆಸಲಾಗುತ್ತಿರುವುದು ಯೋಗದ ಹಿರಿಮೆಯನ್ನು ತಿಳಿಸುತ್ತದೆ. ಭಾರತೀಯ ಯೋಗ ಪದ್ಧತಿಗೆ ವಿಶ್ವಮಾನ್ಯತೆ ದೊರಕಿರುವುದು ಹೆಮ್ಮೆಯ ಸಂಗತಿ ಎಂದರು.
ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ಯೋಗಾಸನಗಳ ಪ್ರದರ್ಶನ, ಪ್ರಾಣಾಯಾಮ, ಭಜನೆ ಮತ್ತು ಶೋಭಾಯಾತ್ರೆಯನ್ನು ಆಯೋಜಿಸಲಾಗಿತ್ತು. ಪ್ರತಿಯೊಂದು ಆಸನಗಳನ್ನು ಪ್ರದರ್ಶಿಸುವಾಗ ಅವುಗಳಿಂದಾಗುವ ಉಪಯೋಗಗಳ ಬಗ್ಗೆ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ವಿವರಿಸಿದರು.
Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!